Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಂಗೀತ ಮತ್ತು ಕಲೆಗಳು ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ; ಶ್ರೀನಿವಾಸನ್ ಎನ್.

ಮೈಸೂರು: ಸಂಗೀತ ಮತ್ತು ಕಲೆಗಳು ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಮೈಸೂರಿನ ವಿಜಯನಗರದಲ್ಲಿರುವ ಶ್ರೀಯೋಗಾನರಸಿಂಹಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸನ್ ಎನ್. ತಿಳಿಸಿದರು.ನಗರದ ಹೂಟಗಳ್ಳಿ ಹೌಸಿಂಗ್ ಬೋರ್ಡ್ನ ಶ್ರೀ ಅನಂತೇಶ್ವರ ಭವನದಲ್ಲಿ ಸರ್ವಕಲಾ ಸೇವಾ ಟ್ರಸ್ಟ್ ಹಾಗೂ ಪಂಚಾಯತ್ ಗ್ರಾಮೀಣಾಭಿವೃದ್ಧಿ ರೈತರ ಸೇವಾ ಸಮಿತಿ ಮೈಸೂರು ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟç ಮಟ್ಟದ ಸುಗ್ಗಿಯರ ಕಲೋತ್ಸವ ಗಾಯನ ಸೀಸನ್ 3 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಯುವ ಪ್ರತಿಭೆಗಳಿಗೆ…

Read More

ಸೇವೆಯಿಂದ ನಿವೃತ್ತರಾದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೋಡುಗೆ

ಮೈಸೂರು; ಪೊಲೀಸ್ ಇಲಾಖೆಯಲ್ಲಿ ಸುಧೀರ್ಘ ಅವಧಿಯವರೆಗೆ ಪ್ರಾಮಾಣಿಕತೆ ಹಾಗೂ ಕರ್ತವ್ಯಪರತೆಯಿಂದ ಸೇವೆ ಸಲ್ಲಿಸಿ ವಯೋ ನಿವೃತ್ತಿಗೊಂಡ ಪೊಲೀಸ್ ಅಧಿಕಾರಿಗಳನ್ನು ಸನ್ಮಾನಿಸಿ ಬೀಳ್ಕೋಡಲಾಯಿತು.ಪಿಎಸ್‌ಐಗಳಾದ ಭಾಸ್ಕರ್ ಕೆ.ಎಸ್, ಗೋಪಾಲಕೃಷ್ಣ ಕೆ, ಎಆರ್‌ಎಸ್‌ಐಗಳಾದ ಚಿಕ್ಕಮಲ್ಲಪ್ಪ, ನಂಜುAಡಯ್ಯ ಸಿ.ಎಂ , ಪ್ರಶಾಂತ್ ಎಎಸ್‌ಐಗಳಾದ ಮನೋಹರ್, ರಾಮಸ್ವಾಮಿ ಹೆಚ್.ಜಿ ಹಾಗೂ ಮುಖ್ಯಪೇದೆ ಮಿತ್ರಕುಮಾರ್ ರವರನ್ನು ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಅಪರ ಪೊಲೀಸ್ ಅಧೀಕ್ಷಕ ಮಲ್ಲಿಕ್ ಸಿ ರವರು, ನಿವೃತ್ತ ಅಧಿಕಾರಿಗಳ ಸೇವೆಯನ್ನು ಸ್ಮರಿಸಿ, ಅವರ ಮುಂದಿನ ನಿವೃತ್ತ ಜೀವನವು…

Read More

ಕಠಿಣ ಪರಿಶ್ರಮದಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ; ಶಾಸಕ ಹರೀಶ್‌ಗೌಡ

ಮೈಸೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಅಭ್ಯಾಸ ಮತ್ತು ಪರಿಶ್ರಮದಿಂದ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.ಮೈಸೂರಿನ ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಿದ್ದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಹಿರಿಯ ಪತ್ರಕರ್ತರಿಗೆ ಅಭಿನಂದನೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಠ್ಯ ಅಭ್ಯಾಸದೊಂದಿಗೆ ಲೋಕಜ್ಞಾನವನ್ನು ವಿದ್ಯಾರ್ಥಿಗಳು ಗಳಿಸಬೇಕು. ಯಾವ ವಿದ್ಯಾರ್ಥಿ ಸಾಮಾನ್ಯ ಜ್ಞಾನವನ್ನು ಸಂಪಾದಿಸುವುದಿಲ್ಲವೋ, ಆತ…

Read More

ಶ್ರೀಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶುಕವನ’ ತಾತ್ಕಾಲಿಕ ಬಂದ್

ಮೈಸೂರು: ನಗರದ ಪ್ರಸಿದ್ಧ ಪ್ರವಾಸಿ ಆಕರ್ಷಣೆಗಳಲ್ಲೊಂದಾದ ಅವಧೂತ ದತ್ತ ಪೀಠದ ಗಿಳಿಗಳ ಪುನರ್ವಸತಿ ಕೇಂದ್ರಶುಕವನ’ವು ಜೂನ್ 1 ರಿಂದ ಮುಂದಿನ ಸೂಚನೆಯವರೆಗೆ ತಾತ್ಕಾಲಿಕವಾಗಿ ಮುಚ್ಚಲ್ಪಡಲಿದೆ ಎಂದು ದತ್ತ ಪೀಠದ ಆಡಳಿತ ಮಂಡಳಿ ತಿಳಿಸಿದೆ.ಅಭಿವೃದ್ಧಿ ಹಾಗೂ ನವೀಕರಣ ಕಾಮಗಾರಿಗಳ ಹಿನ್ನೆಲೆಯಲ್ಲಿ ಶುಕವನಕ್ಕೆ ಸಾರ್ವಜನಿಕರ ಪ್ರವೇಶವನ್ನು ಸದ್ಯಕ್ಕೆ ನಿರ್ಬಂಧಿಸಲಾಗುತ್ತಿದೆ .ಶುಕವನ ಮುಚ್ಚಲ್ಪಟ್ಟಿದ್ದರೂ, ಅದಕ್ಕೆ ಹೊಂದಿಕೊAಡAತಿರುವ ವಿಶ್ವವಿಖ್ಯಾತ ಬೋನ್ಸಾಯ್ ಉದ್ಯಾನವನ ಮತ್ತು ವಿಶ್ವಂ ವಸ್ತು ಸಂಗ್ರಹಾಲಯಗಳು ಎಂದಿನAತೆ ಕಾರ್ಯನಿರ್ವಹಿಸಲಿವೆ. ಪ್ರವಾಸಿಗರು ಮತ್ತು ಸಾರ್ವಜನಿಕರು ಎಂದಿನAತೆ ಈ ಎರಡು ಸ್ಥಳಗಳಿಗೆ ಭೇಟಿ ನೀಡಬಹುದಾಗಿದೆ…

Read More

ಅಂಬಾವಿಲಾಸ ಅರಮನೆ ಮೈದಾನದಲ್ಲಿ ನೂರಾರು ಮಂದಿ ಯೋಗಪಟುಗಳಿಂದ ಯೋಗಾಭ್ಯಾಸ

ಮೈಸೂರು ; ವಿಶ್ವ ಯೋಗ ದಿನದಂದು ಅರಮನೆ ನಗರಿ, ಯೋಗ ನಗರಿ ಎಂದು ಹೆಸರಾಗಿರುವ ಮೈಸೂರು ನಗರದ ವಿವಿಧೆಡೆ 1.20 ಲಕ್ಷ ಜನ ಏಕಕಾಲಕ್ಕೆ ಯೋಗಾಭ್ಯಾಸ ಮಾಡುವ ಮಹಾಸಂಕಲ್ಪದೊAದಿಗೆ ಭಾನುವಾರ ಸಾಮೂಹಿಕ ಯೋಗಾಭ್ಯಾಸ ಮಾಡಲಾಯಿತು.ಯೋಗ ಫೆಡರೇಷನ್ ಆಫ್ ಮೈಸೂರು ವತಿಯಿಂದ ನಗರದ ಅಂಬಾವಿಲಾಸ ಅರಮನೆ ಮುಂಗಾದ ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಾಸಂಕಲ್ಪ ದಿನಸ್ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಯೋಗಪಟುಗಳು ಸಾಮೂಹಿಕ ಯೋಗ್ಯಾಭ್ಯಾಸ ಮಾಡಿದರು.ಆಯುಷ್ ಸಚಿವಾಲಯದ ಸಾಮಾನ್ಯ ಯೋಗ ಶಿಷ್ಟಾಚಾರದ ಪ್ರಕಾರ, 45 ನಿಮಿಷಗಳ ಯೋಗಾಭ್ಯಾಸ ಮಾಡಲಾಯಿತು.ಪ್ರಾರ್ಥನೆ, ಚಾಲನಾ ಕ್ರಿಯೆಗಳ…

Read More

ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಮೈಸೂರು; ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ನಾಯಕ ಸಮಾಜದ ಪ್ರಭಾವಿ ನಾಯಕರಾದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಎಸ್.ಚಿಕ್ಕಮಾದು ಅಭಿಮಾನ ಬಳಗದ ಅಧ್ಯಕ್ಷ ಕ್ಯಾತನಹಳ್ಳಿ ನಾಗರಾಜು ಆಗ್ರಹಿಸಿದ್ದಾರೆ.ಶನಿವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಮತ್ತು ಹಾಸನ ಜಿಲ್ಲೆಯಲ್ಲಿ ನಾಯಕ ಸಮಾಜದ ಸುಮಾರು 6 ಲಕ್ಷ ಮತದಾರರು ಇದ್ದು, ಈ ಭಾಗದಲ್ಲಿ ಇದುವರೆಗೂ ಸಚಿವ ಸಾ ಈ ಸಮಾಜಕ್ಕೆ ನೀಡಿಲ್ಲ. ಹಾಗಾಗಿ ಈ ಭಾಗದ…

Read More

ಮೇ 31ರಂದು ಅರಮನೆ ಅಂಗಳದಲ್ಲಿ ಯೋಗಾಭ್ಯಾಸ

ಮೈಸೂರು: ಮೈಸೂರು ಯೋಗ ಫೆಡರೇಷನ್ ವತಿಯಿಂದ 12ನೇ ಅಂತಾರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ಮೇ 31ರಂದು ನಗರದ ಅರಮನೆ ಆವರಣದಲ್ಲಿ ಯೋಗಾಭ್ಯಾಸ ಹಾಗೂ ಮಹಾ ಸಂಕಲ್ಪ ದಿವಸ್ ಆಯೋಜಿಸಲಾಗಿದೆ ಎಂದು ಜಿಎಸ್‌ಎಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಡಿ.ಶ್ರೀಹರಿ ದ್ವಾರಕನಾಥ್ ತಿಳಿಸಿದರು.ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಂದು ಬೆಳಗ್ಗೆ 5.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಸುಮಾರು ಸಾವಿರ ಮಂದಿ ಯೋಗಾಸಕ್ತರು ಪಾಲ್ಗೊಳ್ಳುವರು. ಇದೇ ವೇಳೆ ನಗರದ ವಿವಿಧ ಅಪಾರ್ಟ್ಮೆಂಟ್, ಶಾಲಾ ಕಾಲೇಜು, ಉದ್ಯಾನಗಳು ಸೇರಿದಂತೆ 120…

Read More

ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯರಿಗೆ ಡಿಸಿಎಂ ಸ್ಥಾನ ನೀಡಲು ಸಂಘಟನೆಗಳ ಆಗ್ರಹ

ಮೈಸೂರು: ನಿರ್ಗಮಿತ ಸಿಎಂ ಸಿದ್ದರಾಮಯ್ಯನವರ ಪುತ್ರರಾದ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮತ್ತು ಅಹಿಂದ ಮೈಸೂರು ಸಂಘಟನೆಗಳು ಕಾಂಗ್ರೆಸ್ ನಾಯಕರನ್ನು ಒತ್ತಾಯಿಸಿದರು.ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಕೆಪಿಸಿಸಿ ಹಾಗೂ ಎಐಸಿಸಿಗೆ ರವಾನಿಸಲು ತೀರ್ಮಾನಿಸಲಾಯಿತು.ಶನಿವಾರ ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ನಡೆದ ಸಭೆಯಲ್ಲಿ, ‘ಅಹಿಂದ ಸಮಯದಾಯದ ಹಿತರಕಕ್ಷಣೆಗೆ, ಪಕ್ಷದ ಹಿತದೃಷ್ಟಿಯಿಂದ ಯತೀಂದ್ರ ಅವರಿಗೆ ಡಿಸಿಎಂ ಸ್ಥಾನ ಕೊಡಬೇಕು. ಸೂಕ್ಷ÷್ಮ ಸಂವೇದನೆಯುಳ್ಳ ವಿದ್ಯಾವಂತ, ಪ್ರಜ್ಞಾವಂತ ಹಾಗೂ ಸಾಮಾಜಿಕ…

Read More

ಗಣಪತಿ ಶ್ರೀಗಳ 84ನೇ ಜನ್ಮದಿನೋತ್ಸವ ಪ್ರಯುಕ್ತ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ವಿವಿಧ ನೆರವು ವಿತರಣೆ

ಮೈಸೂರು: ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ¥ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 84ನೇ ಜನ್ಮದಿನೋತ್ಸವವನ್ನು ಭಾಗವಾಗಿ ಶನಿವಾರ ಆಶ್ರಮದ ವತಿಯಿಂದ ಸಮಾಜದ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗೆ ವಿವಿಧ ನೆರವು ನೀಡುವುದರ ಜತೆಗೆ ವೈದ್ಯಕೀಯ ಉಪಕರಣಗಳನ್ನು ಶ್ರೀಗಳು ವಿತರಿಸಿದರು.ಮೈಸೂರು ವಿಭಾಗದ ವಿಶೇಷಚೇತನರು ಮತ್ತು ಹಿರಿಯ ನಾಗರಿಕರ ಇಲಾಖೆ, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಗಳ ಜಂಟಿ ಸಲಹೆ ಮತ್ತು ಸಹಯೋಗದೊಂದಿಗೆ ಅರ್ಹ…

Read More

ಪಿಎಂ ಸೂರ್ಯ ಘರ್ ಯೋಜನೆಯ ಪ್ರಚಾರ ವಾಹನಕ್ಕೆ ಚಾಲನೆ

ಮೈಸೂರು : ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯಡಿ ಗೃಹಬಳಕೆದಾರರ ಮನೆಯ ಛಾವಣಿಯಲ್ಲಿ ಸೌರಫಲಕಗಳನ್ನು ಸ್ಥಾಪಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪ್ರಚಾರ ವಾಹನಕ್ಕೆ ಶುಕ್ರವಾರ ನಗರದಲ್ಲಿ ಚಾಲನೆ ನೀಡಲಾಯಿತು.ಇಲ್ಲಿನ ವಿಜಯನಗರ 2ನೇ ಹಂತದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ಪ್ರದಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್‌ಇಡಿ ಪರದೆ ಅಳವಡಿಸಿರುವ ವಾಹನದ ಮೂಲಕ ಪ್ರಚಾರ ಕಾರ್ಯಕ್ಕೆ ಚಾವಿಸನಿನಿ ತಾಂತ್ರಿಕ ನಿರ್ದೇಶಕರಾದ ಶರಣಮ್ಮ ಎಸ್. ಜಂಗಿನ ಹಾಗೂ ಚಾವಿಸನಿನಿ ಮೈಸೂರು ವೃತ್ತದ ಮುಖ್ಯ ಇಂಜಿನಿಯರ್ ಎಲ್….

Read More