Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜುಲೈ 29.ರಂದು ಅರ್ಥಪೂರ್ಣವಾಗಿ ಹಡಪದ ಅಪ್ಪಣ್ಣ  ಜಯಂತಿ ಆಚರಣೆ ;  ಆರ್. ಐಶ್ವರ್ಯ

ಮೈಸೂರು:    ಹಡಪದ ಅಪ್ಪಣ್ಣ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ  ಜುಲೈ 29.ರಂದು ನಗರದ ಕಲಾಮಂದಿರದ ಕಿರುರಂಗಮoದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ  ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು, ಅವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ವಿವಿಧ ಮಹನೀಯರ ಜಯಂತಿಗಳ ಆಚರಣೆ ಮಾಡಲಾಗುತ್ತಿದೆ ಎಂದರು. ಹಡಪದ…

Read More

ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ; ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್ ರಾಜು

ಎಚ್.ಡಿ.ಕೋಟೆ: ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರವಾಗಿದ್ದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಮಾದರಿಯಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್ ರಾಜು ತಿಳಿಸಿದರು.ತಾಲೂಕಿನ ಮಂಟಿಯಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವತಿಯಿಂದ ಮಂಗಳವಾರ ಸಂಘಟನೆಯ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಅವರಜನ್ಮದಿನದ ಅಂಗವಾಗಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.ಬುದ್ಧರ ಶಾಂತಿ, ಬಸವಣ್ಣನವರ ಸಮಾನತೆ ಹಾಗೂ ಡಾ….

Read More

ಭವಿಷ್ಯದಲ್ಲಿ ಸೌಂದರ್ಯ ಮತ್ತು ವೆಲ್‌ನೆಸ್ ಉದ್ಯಮಕ್ಕೆ ಅಪಾರ ಅವಕಾಶಗಳು ಹೆಚ್ಚುತ್ತಿವೆ

ಮೈಸೂರು: ಭವಿಷ್ಯದಲ್ಲಿ ಸೌಂದರ್ಯ ಮತ್ತು ವೆಲ್‌ನೆಸ್ ಉದ್ಯಮಕ್ಕೆ ಅಪಾರ ಅವಕಾಶಗಳು ಹೆಚ್ಚುತ್ತಿವೆ ಎಂದು ಮಡಿಕೇರಿಯ ಕಾರ್ಪೋರೇಷನ್ ಬ್ಯಾಂಕ್‌ನ ಎಲ್.ಡಿ.ಎಂ.(ನಿವೃತ್ತ) ಆರ್.ಕೆ. ಬಾಲಚಂದ್ರ ಹೇಳಿದರು.ನಗರದ ರುಡ್‌ಸೆಟ್ ಸಂಸ್ಥೆಯು ಎನ್.ಆರ್.ಎಲ್.ಎಂ. ಮೈಸೂರು ಜಿಲ್ಲಾ ಪಂಚಾಯತ್ ಪ್ರಾಯೋಜಕತ್ವದಲ್ಲಿ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಪ್ರಮಾಣ ಪತ್ರಗಳನ್ನು ಶಿಬಿರಾರ್ಥಿಗಳಿಗೆ ನೀಡಿ ಮಾತನಾಡಿದ ಅವರು, ಇಂದಿನ ಆಧುನಿಕ ಜೀವನಶೈಲಿಯಲ್ಲಿ ಸೌಂದರ್ಯ ಮತ್ತು ವೆಲ್‌ನೆಸ್ ಕ್ಷೇತ್ರವು ವೇಗವಾಗಿ ಬೆಳೆಯುತ್ತಿರುವ ಉದ್ಯಮಗಳಲ್ಲಿ ಒಂದಾಗಿದೆ. ಆರೋಗ್ಯ, ವೈಯಕ್ತಿಕ ಆರೈಕೆ ಮತ್ತು ಆತ್ಮವಿಶ್ವಾಸಕ್ಕೆ…

Read More

ನಿಧನರಾದ ಚೆನ್ನಮ್ಮ ದೇವೇಗೌಡರಿಗೆ ದೇವರಾಜ ಮೊಹಲ್ಲಾದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ

ಮೈಸೂರು: ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ನಿಧನದ ಹಿನ್ನೆಲೆಯಲ್ಲಿ ಮೈಸೂರಿನ ದೇವರಾಜ ಮೊಹಲ್ಲಾ ನಿವಾಸಿಗಳ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಸಭೆ ನಡೆಯಿತು.ನಗರಪಾಲಿಕೆ ಮಾಜಿ ಸದಸ್ಯ ಪ್ರಶಾಂತ್ ಗೌಡ ಹಾಗು ನಿವಾಸಿಗಳು ಚೆನ್ನಮ್ಮ ದೇವೇಗೌಡರ ಜೀವನ ಮೌಲ್ಯಗಳು, ಕುಟುಂಬಕ್ಕೆ ನೀಡಿದ ಬೆಂಬಲ ಹಾಗೂ ಸಮಾಜಕ್ಕೆ ನೀಡಿದ ಆದರ್ಶಗಳನ್ನು ಸ್ಮರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಶಾಂತ್ ಗೌಡ, 89 ವರ್ಷ ಪೂರೈಸಿ ಇಹಲೋಕ ತ್ಯಜಿಸಿರುವ ಚೆನ್ನಮ್ಮ ದೇವೇಗೌಡ ಅವರ ಅಗಲಿಕೆ ರಾಜ್ಯ ಹಾಗೂ ದೇಶಕ್ಕೆ ತುಂಬಲಾರದ ನಷ್ಟವಾಗಿದೆ…

Read More

ಅರ್ಹ ಫಲಾನುಭವಿಗಳು ಗ್ಯಾರೆಂಟಿ ಯೋಜನೆಗಳ ಸೌಲಭ್ಯದಿಂದ ವಂಚಿತರಾಗಬಾರದು; ಅರುಣ್ ಕುಮಾರ್

ಮೈಸೂರು: ಅರ್ಹ ಫಲಾನುಭವಿಗಳು ಗ್ಯಾರೆಂಟಿ ಯೋಜನೆಗಳ ಸೌಲಭ್ಯಗಳಿಂದ ವಂಚಿತರಾಗಬಾರದು . ಒಂದು ವೇಳೆ ಫಲಾನುಭವಿಗಳು ಯೊಜನೆಯಿಂದ ವಂಚಿತರಾಗಿದ್ದರೆ ಅವರನ್ನು ಯೋಜನೆಯಲ್ಲಿ ನೊಂದಾಯಿಸಿಕೊಳ್ಳಿ ಎಂದು ಗ್ಯಾರೆಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ನ ಡಿ.ದೇವರಾಜ ಅರಸು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗ್ಯಾರೆಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೃತ ಫಲಾನುಭವಿಗಳನ್ನು ಯೋಜನೆಗಳಿಂದ ಕೈಬಿಡುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.ಗೃಹ ಜ್ಯೋತಿ ಯೋಜನೆಯ ಅಪ್ಡೇಟ್ ನಡೆಯುತ್ತಿದ್ದು, ಅರ್ಹ…

Read More

ಸೋನಂ ವಾಂಗ್ಚುಕ್ ಸೇರಿದಂತೆ ಹಲವು ವಿದ್ಯಾರ್ಥಿಗಳ ಬಲವಂತದ ಬಂಧನ ಖಂಡಿಸಿ ವಿವಿಧ ಸಂಘ, ಸಂಸ್ಥೆಗಳಿ0ದ ಪ್ರತಿಭಟನೆ

ಮೈಸೂರು: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಶಾಂತಿಯುತವಾಗಿ ಸತ್ಯಾಗ್ರಹ ನಡೆಸುತ್ತಿದ್ದ ಸೋನಂ ವಾಂಗ್ಚುಕ್ ಸೇರಿದಂತೆ ಹಲವು ವಿದ್ಯಾರ್ಥಿಗಳ ಬಲವಂತದ ಬಂಧನ ಖಂಡಿಸಿ ಮಂಗಳವಾರ ನಗರದ ವಿವಿಧೆಡೆ ವಿವಿಧ ಸಂಘ, ಸಂಸ್ಥೆಗಳಿAದ ಪ್ರತಿಭಟನೆ ನಡೆಸಲಾಯಿತು.ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಭಾರತ ವಿದ್ಯಾರ್ಥಿ ಫೆಡರೇಷನ್‌ನ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು.ಮೇ 3ರಂದು ನಡೆದ ನೀಟ್ ಯುಜಿ ಪರೀಕ್ಷೆಯಲ್ಲಿ ಸುಮಾರು 22 ಲಕ್ಷ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಆದರೆ ರಾಜಸ್ಥಾನದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಟಿಎ…

Read More

ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್‌ರಿಂದ ಎಸ್.ಐ.ಆರ್. ಪ್ರಕ್ರಿಯೆ ಪ್ರಗತಿ ಪರಿಶೀಲನೆ

ಮೈಸೂರು; ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಗಳ ಪ್ರಗತಿ ಪರಿಶೀಲಿಸಿದರು.ಬಿ.ಎಲ್.ಓ ಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕತೆಯಿಂದ ನಿರ್ವಹಿಸಬೇಕು. ಮತದಾರರ ನೋಂದಣಾಧಿಕಾರಿಗಳು ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಕ್ರಿಯೆಯನ್ನು ಪರಿಶೀಲಿಸಬೇಕು. ಎಸ್.ಐ.ಆರ್ ಕಾರ್ಯವನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ನಿಗಾ…

Read More

ತಾಲ್ಲೂಕಿನ ಟಿಎಪಿಸಿಎಂಎಸ್ ನ 12 ಸ್ಥಾನಗಳಿಗೆ 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

ಎಚ್.ಡಿ.ಕೋಟೆ : ತಾಲ್ಲೂಕಿನ ಟಿಎಪಿಸಿಎಂಎಸ್ ನ 12 ಸ್ಥಾನಗಳಿಗೆ ಇದೇ ಜು. 26ರ ಭಾನುವಾರ ನಡೆಯುವ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನವಾಗಿದ್ದ ಸೋಮವಾರ ಕಾಂಗ್ರೆಸ್, ಜಾದಳ, ಬಿಜೆಪಿ ಬೆಂಬಲಿತ 39 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ಅಂತಿಮವಾಗಿ ಎ ತರಗತಿಯಲ್ಲಿ 8, ಬಿ. ತರಗತಿಯಲ್ಲಿ 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಇರುವ ಮೂಲಕ ಚುನಾವಣಾ ಕಣ ರಂಗೇರಿದೆ. ಇದಕ್ಕೂ ಮುನ್ನ ಕಾಂಗ್ರೆಸ್, ಜಾದಳ, ಬಿಜೆಪಿ ಬೆಂಬಲಿತ 71 ಅಭ್ಯರ್ಥಿಗಳು ಸ್ಪರ್ಧೆ ಬಯಸಿ ನಾಮಪತ್ರ…

Read More

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳು ಅತ್ಯಗತ್ಯ ;ಡಾ.ಸಂತೋಷ್ ಚೊಕ್ಕಾಡಿ

ಡಿಪಿಬಿಎಸ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ  ​ಪಿರಿಯಾಪಟ್ಟಣ: ವಿದ್ಯಾರ್ಥಿಗಳು ಕೇವಲ ಶಿಕ್ಷಣಜ್ಞಾನ ಪಡೆದರೆ ಸಾಲದು, ಅದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ಕಲಿತ ವಿದ್ಯೆಗೆ ಸಾರ್ಥಕತೆ ಬರುತ್ತದೆ ಎಂದು ಸರಗೂರು ತಾಲೂಕಿನ ಬಿ. ಮಟಕೆರೆ ಕೆ.ಪಿ.ಎಸ್. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹಾಗೂ ಸಾಹಿತಿ ಡಾ.ಸಂತೋಷ್ ಚೊಕ್ಕಾಡಿ ತಿಳಿಸಿದರು. ​ಪಟ್ಟಣದ ಅರಸು ಭವನದಲ್ಲಿ ಡಿಪಿಬಿಎಸ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ,…

Read More

ಜು.22ರಂದು ವಿಶೇಷ ‘ಸ್ವಾತಿ’ ಪೂಜೆ

ಮೈಸೂರು; ನಗರದ ಕಾಳಿದಾಸ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷಿö್ಮÃನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಜು.22ರಂದು ಬುಧವಾರ ‘ಸ್ವಾತಿ’ ನಕ್ಷತ್ರದ ಪ್ರಯುಕ್ತ ವಿಶೇಷ ಪೂಜೆ ಹಮ್ಮಿಕ್ಕೊಳ್ಳಲಾಗಿದೆ. ಅಂದು ಬೆಳಿಗ್ಗೆ 8.30ಕ್ಕೆ ಸಂಕಲ್ಪ, 9.30ಕ್ಕೆ ಅಭಿಷೇಕ, 11ಕ್ಕೆ ಅಲಂಕಾರ, 12ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 1ಕ್ಕೆ ಶಾತ್ತುಮೊರೈ, 1 ಗಂಟೆಗೆ ತೀರ್ಥ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿದೆ. ಸಂಜೆ 8ಕ್ಕೆ ಪ್ರಾಕಾರೋತ್ಸವ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ಪ್ರಕಟಣೆಯಲ್ಲಿ…

Read More