ಎಚ್.ವಿ.ರಾಜೀವ್ ಸ್ನೇಹ ಬಳಗದಿಂದ ಕೃಷ್ಣರಾಜ ಕ್ಷೇತ್ರದ 450ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಾಧನ ಪುರಸ್ಕಾರ
ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 450ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಎಚ್.ವಿ.ರಾಜೀವ್ ಸ್ನೇಹ ಬಳಗ ‘ಸಾಧನಾ ಪುರಸ್ಕಾರ’ ನೆರವೇರಿಸಲಾಯಿತು.ಭಾನುವಾರ ನಗರದ ಶಾರದಾವಿಲಾಸ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಆಯೋಜಿಸಿದ್ದ 2025-26ನೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದವರಿಗೆ ವೃತ್ತಿ ಮಾರ್ಗದರ್ಶನ ಹಾಗೂ ಸಾಧನಾ ಪುರಸ್ಕಾರ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ನಾಗಮ್ಮ, ಕೃಷ್ಣರಾಜ ಕ್ಷೇತ್ರದಲ್ಲೇ 450ಕ್ಕೂ ಹೆಚ್ಚು…