Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪ್ರತಿಭಾ ದಿನಾಚರಣೆ’

` ಮೈಸೂರು; ನಗರದ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜ್ ನಲ್ಲಿ2026-27ನೇ ಸಾಲಿನ ಪ್ರತಿಭಾ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಪ್ರತಿಭಾ ದಿನಾಚರಣೆಯ ಪ್ರಯುಕ್ತ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಫ್ಯಾಷನ್ ಶೋ ಮತ್ತು ಮಿಸೆಸ್ ಜೆಎಸ್‌ಎಸ್ ನಡೆಯಿತು. ಈ ಸ್ಪರ್ಧೆಯಲ್ಲಿ ಮಿಸೆಸ್ ಜೆಎಸ್‌ಎಸ್ ಕು. ಸಿಂಚನ ಎಂ ಬಿ, ಪೋಟೋ ಜೆನಿಕ್ ಆಗಿ ಕು. ಅನುಷ ಎಸ್ ವಿ ಎಂ, ಮಿಸೆಸ್ ಎಲಿಗೆಂಟ್ ಆಗಿ ಕು. ಅಪೂರ್ವ ಎ ಎಸ್, ಹಾಗೂ ಮಿಸೆಸ್ ಜ್ಯೂವೆಲಿಕ್ ಆಗಿ ಕು. ಭೂಮಿಕ ಹೆಚ್…

Read More

ವಿದ್ಯಾರ್ಥಿಗಳಿಗೆ ಎಸ್‌ಐಆರ್ ಕುರಿತು ಅರಿವು

ಮೈಸೂರು; ನಗರದ ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಎಸ್‌ಐಆರ್ ಕುರಿತು ಅರಿವು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಸ್ಟರ್ ಟ್ರೆöÊನರ್, ಚುನಾವಣಾ ತರಬೇತಿ ಮತ್ತು ಜನಗಣತಿ ತರಬೇತಿದಾರ ರಮೇಶ ಎಂ ಆಗಮಿಸಿ, ಮತದಾನದ ಮಹತ್ವ ಹಾಗೂ ಎಸ್‌ಐಆರ್ ಅರ್ಜಿಯನ್ನು ಯಾವ ರೀತಿಯಾಗಿ ಭರ್ತಿ ಮಾಡಬೇಕು ಮತ್ತು ಅದರ ಪ್ರಾಮುಖ್ಯತೆಯನ್ನು ಕುರಿತು ಎಲ್ಲಾ ವಿದ್ಯಾರ್ಥಿಗಳಿಗೆ, ಅಧ್ಯಾಪಕರು ಹಾಗೂ ಅಧ್ಯಾಪಕೇತರರಿಗೆ ತಿಳಿಸಿಕೊಟ್ಟರು.ಈ ವೇಳೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಆರ್. ಜಯಕುಮಾರಿ, ಸಹಾಯಕ ತರಬೇತುದಾರ ಮಂಜುನಾಥ್, ಸಿಇಓ ಡಾ….

Read More

ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್, ಉಪವಾಸನಿರತ ಹೋರಾಟಗಾರರನ್ನು ಬಲವಂತವಾಗಿ ಎಳೆದುಕೊಂಡು ಹೋಗಿರುವ ಸರ್ಕಾರ ಕ್ರಮ ಖಂಡಿಸಿ ಪ್ರತಿಭಟನೆ

ಮೈಸೂರು: ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಹಾಗೂ ಇತರ ಉಪವಾಸನಿರತ ಹೋರಾಟಗಾರರನ್ನು ಬಲವಂತವಾಗಿ ಎಳೆದುಕೊಂಡು ಹೋಗಿರುವ ಸರ್ಕಾರ ಹಾಗೂ ಪೊಲೀಸರ ಕ್ರಮವನ್ನು ಖಂಡಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರಸರ್ಕಾರದ ವಿರುದ್ದ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.ದೇಶದಲ್ಲಿ ನಡೆಯುತ್ತಿರುವ ಚಳುವಳಿಯ ಭಾಗವಾಗಿ ಖ್ಯಾತ ಶಿಕ್ಷಣ ತಜ್ಞ, ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಮತ್ತು ಇತರೆ ಹೋರಾಟಗಾರರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹವು 20ನೇ ದಿನಕ್ಕೆ ಕಾಲಿಟ್ಟಿದೆ. ಈಗಾಗಲೇ ಅವರ ಆರೋಗ್ಯ…

Read More

ರೈತರ ಆದಾಯ ಹೆಚ್ಚಳಕ್ಕೆ ವೈಜ್ಞಾನಿಕ ಕೃಷಿ ಮತ್ತು ಸಮಗ್ರ ಪೋಷಕಾಂಶಗಳ ನಿರ್ವಹಣೆ ಅಗತ್ಯ: ರವಿ ಎಸ್.ಕೆ.

ಮೈಸೂರು: ಹವಾಮಾನ ವೈಪರೀತ್ಯದ ಪ್ರಸ್ತುತ ದಿನಗಳಲ್ಲಿ ರೈತರು ಸಮಗ್ರ ಬೇಸಾಯ ಪದ್ಧತಿಯನ್ನು ಅಳವಡಿಸಿಕೊಂಡು, ವೈಜ್ಞಾನಿಕವಾಗಿ ಕೃಷಿ ಮಾಡುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ನಂಜನಗೂಡು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ರವಿ ಎಸ್.ಕೆ. ಹೇಳಿದರು.ಮೈಸೂರಿನ ನಾಗನಹಳ್ಳಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ, 2026-27ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಚಿiÀÄಡಿ, ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಹೋಬಳಿಯ ತೊರವಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ, ಕೃಷಿ ಬೆಳೆಗಳಲ್ಲಿ ಬೀಜೋಪಚಾರದ ಮಹತ್ವ ಮತ್ತು ಶಿಫಾರಸ್ಸಿನನ್ವಯ ರಸಗೊಬ್ಬರಗಳ ಮಿತ ಬಳಕೆ ಕುರಿತ ಒಂದು…

Read More

ವಿದ್ಯಾರ್ಥಿಗಳು ಕೃಷಿಯ ಮಹತ್ವ ಅರಿಯಬೇಕು: ಹಾರ್ಟ್ ಸಂಸ್ಥೆಯ ಅಧ್ಯಕ್ಷ ಶಿವಕುಮಾರ

ಮೈಸೂರು: ಸೇಂಟ್ ಮರಿಯಾ ಡಿ ಮ್ಯಾಟಿಯಾಸ್ ಶಾಲೆ, ಮೈಸೂರು ಹಾಗೂ ಹಾರ್ಟ್ ಸಂಸ್ಥೆಯ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ “ಅಣಬೆ ಕೃಷಿ ಮತ್ತು ಅಣಬೆಯ ಮಹತ್ವ” ಕುರಿತು ಪರಿಚಯಾತ್ಮಕ ಹಾಗೂ ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಾರ್ಟ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಿವಕುಮಾರ ಮಾತನಾಡಿ, ವಿದ್ಯಾರ್ಥಿಗಳು ಕೃಷಿಯ ಜ್ಞಾನ ಮತ್ತು ಅದರ ಮಹತ್ವವನ್ನು ಅರಿತುಕೊಳ್ಳುವುದು ಅತ್ಯಗತ್ಯ ಎಂದು ತಿಳಿಸಿದರು. ಕೃಷಿ ನಮ್ಮ ದೇಶದ ಆರ್ಥಿಕತೆಯ ಪ್ರಮುಖ ಆಧಾರವಾಗಿದ್ದು, ಅಣಬೆ ಕೃಷಿಯಂತಹ ವೈಜ್ಞಾನಿಕ ಮತ್ತು ಲಾಭದಾಯಕ ಕೃಷಿ…

Read More

ಶಿಕ್ಷಣಕ್ಕಿಂತ ಮಹತ್ವದ ಸಂಪತ್ತು ಬೇರೊಂದಿಲ್ಲ: ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್

ಮೈಸೂರು: ನಮ್ಮ ಜೀವನದಲ್ಲಿ ಅನೇಕ ಸಂಪತ್ತನ್ನು ಸೃಷ್ಟಿಸಿಕೊಳ್ಳಬಹುದು. ಆದರೆ ಶಿಕ್ಷಣ ಕ್ಕಿಂತ ಮಹತ್ವವಾದ ಸಂಪತ್ತು ಬೇರೊಂದಿಲ್ಲ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹ ಅಧಿಕಾರಿ ಎಸ್.ಯುಕೇಶ್ ಕುಮಾರ್ ತಿಳಿಸಿದರು.ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ವತಿಯಿಂದ ನಡೆದ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಅಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಪೋಷಕರ ಪ್ರಮುಖ ಜವಬ್ದಾರಿ. ಅದರಂತೆ ನಮ್ಮ ಇಲಾಖೆಯ…

Read More

ಬರನಿರ್ವಹಣೆ: ರಾಗಿ ಸೇರಿದಂತೆ ಪರ್ಯಾಯ ಬೆಳೆಗಳನ್ನು ಬೆಳೆಯಲು ರೈತರಿಗೆ ಸಲಹೆ

ಮೈಸೂರು: ದೇಶದ ಹಲವು ರಾಜ್ಯಗಳಲ್ಲಿ ಆವರಿಸಿರುವ ಬರದ ಛಾಯೆ ಕರ್ನಾಟಕದ ಬಹುತೇಕ ಜಿಲ್ಲೆಗಳನ್ನು ಕಾಡಿದೆ. ಬಹುತೇಕ ಕೃಷಿಯನ್ನೇ ಅವಲಂಬಿಸಿರುವ ಪರಂಪರೆಯ ನೆಲ ಮೈಸೂರು ಕೂಡ ವರುಣನ ಕೃಪೆಗೆ ತುತ್ತಾಗಿದ್ದು, ಜಿಲ್ಲೆಯಲ್ಲಿ ಶೇಕಡ 50 ರಷ್ಟು ಅಧಿಕ ಪ್ರಮಾಣದ ಬಿತ್ತನೆ ಕುಂಠಿತವಾಗಿದೆ. ಹೀಗಾಗಿ ಕಡಿಮೆ ನೀರು ಆಶ್ರಯಿಸುವ ಪರ್ಯಾಯ ಬೆಳೆ ಬಗ್ಗೆ ಗಮನ ಹರಿಸುವಂತೆ ರೈತರಿಗೆ ಕೃಷಿ ಇಲಾಖೆ ಸೂಚಿಸಿದೆ.ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಗಳು ರೈತರಲ್ಲಿ ಬರ ನಿರ್ವಹಣೆಯ ಬಗ್ಗೆ ನಿರಂತರವಾಗಿ ಅರಿವು ಮೂಡಿಸುತ್ತ ಬಂದಿದ್ದು ಬೆಳೆ ವಿಮೆ…

Read More

ಜೆಡಿಎಸ್ ನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬರು ಶ್ರಮಿಸಬೇಕು ; ಮಾಜಿ ಶಾಸಕ ಕೆ .ಮಹದೇವ್

ಪಿರಿಯಾಪಟ್ಟಣ : ಪಕ್ಷ ಸಂಘಟನೆಯ ಮೂಲಕ ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಮಾಜಿ ಶಾಸಕ ಕೆ ಮಹದೇವ್ ತಿಳಿಸಿದರು.  ಪಟ್ಟಣದ ಶ್ರೀ ಮಂಜುನಾಥ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಕಾರ್ಯಕರ್ತರ ಬೂತ್ ಕಮಿಟಿ ಸಭೆ ಯನ್ನು ಉದ್ಘಾಟಿಸಿ ಮಾತನಾಡಿದರು.  ಕಾಂಗ್ರೆಸ್ ಪಕ್ಷವು ಜೆಡಿಎಸ್ ಮತ್ತು ಬಿಜೆಪಿ ಯವರು ಮತ ಕಳ್ಳತನ  ಮಾಡುತ್ತಿದ್ದಾರೆ ಎಂದು ಆರೋಪಿಸುವುದರ ಮೂಲಕ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸಚಿವ ಎಚ್ ಡಿ…

Read More

ನಿಯಮ ಪಾಲಿಸಿದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಚಾಮುಂಡೇಶ್ವರಿಯ ದರ್ಶನವೇ ಸಿಗಲಿಲ್ಲ !

ಮೈಸೂರು; ಆಷಾಢ ಮಾಸದ ಮೊದಲ ಶುಕ್ರವಾರವಾದ ಇಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯನವರಿಗೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಲು ಸಾಧ್ಯವಾಗಲಿಲ್ಲ. ಇದಕ್ಕೆ ಕಾರಣ ವಿವಿಐಪಿ, ವಿಐಪಿಗಳಿಗೆ ದರ್ಶನಕ್ಕಾಗಿ ನಿಗದಿಪಡಿಸಿದ್ದ ಸಮಯದ ಅವಧಿ ಮೀರಿದ್ದು. ಮುಂಜಾನೆ 5 ರಿಂದ ಬೆಳಗ್ಗೆ 9ರ ತನಕ ಮಾತ್ರ ಗಣ್ಯರು, ಅತಿ ಗಣ್ಯರಿಗೆ ತಾಯಿ ಚಾಮುಂಡೇಶ್ವರಿಯ ದರ್ಶನಕ್ಕಾಗಿ ಸಮಯವನ್ನು ನಿಗದಿಪಡಿಸಲಾಗಿತ್ತು. ಆದರೆ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯನವರು ಬೆಳಗ್ಗೆ 10.30ಕ್ಕೆ ಬೆಟ್ಟಕ್ಕೆ ಬಂದರು. ಆಗಾಗಲೇ U್ಪಣ್ಯರ ದರ್ಶನದ ಸಮಯ ಮೀರಿ…

Read More

ಭಯ ಹೋಗಲಾಡಿಸಲು ಅಣುಕು ಪರೀಕ್ಷೆಗಳು ಸಹಕಾರ: ಎಸ್.ಎಲ್. ಚೆನ್ನಬಸವಣ್ಣ

ಮೈಸೂರು: ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಉದ್ಯೋಗಾಕಾಂಕ್ಷಿಗಳ ಮನಸ್ಸಿನಲ್ಲಿರುವ ಭಯ ಮತ್ತು ಆತಂಕವನ್ನು ಹೋಗಲಾಡಿಸಲು ಅಣುಕು ಪರೀಕ್ಷೆಗಳು ಹೆಚ್ಚು ಸಹಕಾರಿಯಾಗಲಿವೆ ಎಂದು ಕರ್ನಾಟಕ ಪೊಲೀಸ್ ಅಕಾಡೆಮಿ ಉಪನಿರ್ದೇಶಕ ಎಸ್.ಎಲ್. ಚೆನ್ನಬಸವಣ್ಣ ಹೇಳಿದರು.ಶುಕ್ರವಾರ ಮೈಸೂರಿನ ನಗರ ಕೇಂದ್ರ ಗ್ರಂಥಾಲಯದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಅಣುಕು ಪರೀಕ್ಷೆಗೆ ಚಾಲನೆ ನೀಡಿ, ಅಭ್ಯರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮೈಸೂರಿನ ನಗರ ಕೇಂದ್ರ ಗ್ರಂಥಾಲಯವು ಹಮ್ಮಿಕೊಂಡಿರುವ ಈ ಅಣುಕು ಪರೀಕ್ಷೆಗಳ ಸರಣಿ ಅತ್ಯಂತ ವಿಶೇಷವಾದುದಾಗಿದೆ. ಇದು ಬಡ ಹಾಗೂ ಗ್ರಾಮೀಣ ಭಾಗದ…

Read More