Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಬಿಜೆಪಿಯಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಹಾಯ ಕೇಂದ್ರಕ್ಕೆ ಚಾಲನೆ

ಮೈಸೂರು; ಚಾಮುಂಡೇಶ್ವರಿ ಕ್ಷೇತ್ರದ ನಗರ ಮಂಡಲದ ವತಿಯಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಹಾಯ ಕೇಂದ್ರವನ್ನು ಶಾರದಾದೇವಿನಗರದಲ್ಲಿ ಮುಖಂಡ ಕವೀಶ್ ಗೌಡ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, 2002ರ ಮತಪಟ್ಟಿಯಲ್ಲಿ ಹೆಸರು ಹುಡುಕಲು ಅನೇಕರಿಗೆ ಕಷ್ಟವಾಗುತ್ತಿರುವುದನ್ನು ಮನಗಂಡು, ಬಿಜೆಪಿ ವತಿಯಿಂದ ಕ್ಷೇತ್ರದ ವಿವಿದೆಡೆ ಸಹಾಯ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಅದನ್ನು ಕ್ಷೇತ್ರದ ಮತದಾರರು ಸದುಪಯೋಗಿಸಿಕೊಳ್ಳಬೇಕೆಂದು ತಿಳಿಸಿದರು.ನಂತರ ಮತದಾರರಿಗೆ ಬಿ.ಎಲ್.ಓ.ಗಳ ಸಂಪರ್ಕ, 2002ರ ಮತ ಪಟ್ಟಿಯಲ್ಲಿ ಹೆಸರು ಹುಡುಕಲು, ಎನ್ಯೂಮರೇಷನ್ ಅರ್ಜಿ ಭರಿಸಲು ಸಹಾಯ ಮಾಡಲಾಯಿತು. ಈ ವೇಳೆಚಾಮುಂಡೇಶ್ವರಿ ನಗರ ಮಂಡಲದ…

Read More

ವಿಜಯ ವಿಠಲ ಕಾಲೇಜಿನಲ್ಲಿ ವಿಜ್ಞಾನ ಸಂಘದ ಉದ್ಘಾಟನೆ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆ

ಮೈಸೂರು; ನಗರದ ವಿಜಯ ವಿಠಲ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ಉದ್ಘಾಟನೆ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಜೆ.ಎಸ್.ಎಸ್. ಮೆಡಿಕಲ್ ಕಾಲೇಜಿನ ಬಯೋ ಕೆಮಿಸ್ಟಿç ವಿಭಾಗದ ಪ್ರಾಧ್ಯಾಪಕ ಡಾ. ಪ್ರಸನ್ನ ಕೆ. ಸಂತೇಕಡೂರು ಮಾತನಾಡಿ, ವಿಜ್ಞಾನ ವೇದಿಕೆಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಕುತೂಹಲ, ಸಂಶೋಧನಾ ಆಸಕ್ತಿ ಮತ್ತು ಸೃಜನಶೀಲತೆಯನ್ನು ಬೆಳೆಸುವ ಒಂದು ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.ವಿಜ್ಞಾನ ಸಂಘದ ಮೂಲಕ ವಿದ್ಯಾರ್ಥಿಗಳು ವಿಜ್ಞಾನ ಪ್ರದರ್ಶನ, ಮಾದರಿ ತಯಾರಿಕೆ, ವಿಜ್ಞಾನ…

Read More

ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ವೈದ್ಯರ ಪಾತ್ರ ಅಪಾರ: ರೊ.ಬಲರಾಮ್

ಪಿರಿಯಾಪಟ್ಟಣ: ರೋಗಿಗಳನ್ನು ಉಳಿಸುವಾಗ ತಮ್ಮನ್ನು ತಾವು ರಕ್ಷಿಸಿಕೊಳ್ಳುವುದಕ್ಕೂ ಆದ್ಯತೆ ನೀಡಬೇಕು ಎಂದು ಪಿರಿಯಾಪಟ್ಟಣ ರೋಟರಿ ಮಿಡ್ ಟೌನ್ ಅಧ್ಯಕ್ಷ ಬಲರಾಮ್ ತಿಳಿಸಿದರು.  ಪಟ್ಟಣದ ರೋಟರಿ ಸಂಸ್ಥೆ ಆವರಣದಲ್ಲಿ ವಿಶ್ವ ವೈದ್ಯರ ದಿನಾಚರಣೆ ಅಂಗವಾಗಿ ತಾಲ್ಲೂಕಿನಲ್ಲಿ ಉತ್ತಮ ಸೇವೆ ಮಾಡಿದ ವೈದ್ಯರಿಗಾಗಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ವೈದ್ಯೋ ನಾರಾಯಣೋ ಹರಿ ಎಂಬ ನುಡಿಯಂತೆ ವೈದ್ಯರು ನಾರಾಯಣನಿಗೆ ಸಮ. ಜನರ ಜೀವ ರಕ್ಷಣೆಯಲ್ಲಿ ಸದಾ ಮುಂದಿರುವ ವೈದ್ಯರು ತಮ್ಮ ಆರೋಗ್ಯ ರಕ್ಷಣೆಗೂ ಆದ್ಯತೆ ನೀಡಬೇಕು. ಸಾಮಾಜಿಕ ಹೊಣೆಗಾರಿಕೆ ವೈದ್ಯರ…

Read More

ಮಾಜಿ ಸಚಿವ ರಾಮಚಂದ್ರಗೌಡ ನಿಧನಕ್ಕೆ ಸುತ್ತೂರು ಶ್ರೀಗಳಿಂದ ಸಂತಾಪ

ಮೈಸೂರು; ಮಾಜಿ ಸಚಿವ ರಾಮಚಂದ್ರೇಗೌಡರು ದೈವಾಧೀನರಾಗಿರುವುದು ವಿಷಾದನೀಯ ಸಂಗತಿ ಎಂದು ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.ರಾಮಚಂದ್ರೇಗೌಡರು ಭಾರತೀಯ ಜನತಾ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದರು. ವಿಧಾನಪರಿಷತ್ತಿಗೆ ಬೆಂಗಳೂರು ಪದವೀಧರರ ಕ್ಷೇತ್ರದಿಂದ ಐದು ಬಾರಿ ಆಯ್ಕೆಯಾಗಿದ್ದು ಅವರ ಜನಪ್ರಿಯತೆಯ ದ್ಯೋತಕ. ಆರ್‌ಎಸ್‌ಎಸ್ ಹಿನ್ನೆಲೆಯಿಂದ ಬಂದಿದ್ದವರು. ನಾಲ್ಕು ದಶಕಗಳ ರಾಜಕಾರಣದಲ್ಲಿ ದಕ್ಷತೆಗೆ ಮತ್ತೊಂದು ಹೆಸರಾಗಿದ್ದವರು. ಸರಳ ಸಜ್ಜನಿಕೆಗೆ ಹೆಸರಾಗಿದ್ದರು. ಅಜಾತಶತ್ರುಗಳ. ಪಕ್ಷಾತೀತವಾಗಿ ಮಿತ್ರರ ಬಳಗವನ್ನು ಹೊಂದಿದ್ದರು. ರೇಷ್ಮೆ, ವಿಜ್ಞಾನ ಹಾಗೂ ತಂತ್ರಜ್ಞಾನ ಮತ್ತು ವೈದ್ಯಕೀಯ…

Read More

ಬೈಕುಗಳ ಮುಖಾಮುಖಿ ಢಿಕ್ಕಿ  ಓರ್ವ ಸ್ಥಳದಲ್ಲೇ ಸಾವು,ಮತ್ತೊರ್ವನ ಸ್ಥಿತಿ ಗಂಭೀರ.

 ಪಿರಿಯಾಪಟ್ಟಣ: ಎರಡು ಬೈಕ್ ಗಳ ಮುಖಾಮುಖಿ ಢಿಕಿಯಾಗಿ ಓರ್ವ ಸವಾರ ಸ್ಥಳದಲ್ಲೇ ಸಾವಿಗೀಡಾಗಿ, ಮತ್ತೊರ್ವನ ಸ್ಥಿತಿ ಚಿಂತಾಜನಕ ಸ್ಥಿತಿಯಲ್ಲಿರುವ ಘಟನೆ ತಾಲೂಕಿನ ಕಂಪಲಾಪುರದಲ್ಲಿ  ಬುಧವಾರ ಬೆಳಗ್ಗೆ ನಡೆದಿದೆ.  ತಾಲ್ಲೂಕಿನ ಬಿ.ಎಂ.ರಸ್ತೆಯ ಜವನಿಕುಪ್ಪೆ ಗ್ರಾಮದ ಲೇ. ಕೆಂಪೇಗೌಡರ ಮಗ ಕೃಷ್ಣ(45) ಎಂಬಾತನೆ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ.  ಬುಧವಾರ ಬೆಳಗ್ಗೆ ಕೃಷ್ಣ ಜವನಿಕುಪ್ಪೆಯಿಂದ ಕಂಪಲಾಪುರದ ಅಂಗಡಿ ಗೆ  ಬಂದು ತಮ್ಮ ಹೀರೋ ಹೋಂಡಾ   ಬೈಕನ್ನು(KA  45K2839) ತಿರುಗಿಸುವ ವೇಳೆ ಕುಶಾಲನಗರ ಕಡೆಯಿಂದ ಮೈಸೂರು ಕಡೆಗೆ ಬರುತ್ತಿದ್ದ ಪಲ್ಸರ್ ಎನ್ಎಸ್ (KA12Y5303)…

Read More

ದಲಿತರು ಇಂದಿಗೂ ಭೂಮಿ ಉಳಿಸಿಕೊಳ್ಳಲು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ

ಎಚ್.ಡಿ.ಕೋಟೆ: ಸ್ವಾತಂತ್ರ್ಯ ಬಂದು ಎಂಬತ್ತು ವರ್ಷ ಸಮೀಪಿಸುತ್ತಿದ್ದರೂ ಕೂಡ ದಲಿತರು ಇಂದಿಗೂ ಭೂಮಿ ಉಳಿಸಿಕೊಳ್ಳಲು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ದಸಂಸ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕ ಮಲ್ಲಹಳ್ಳಿ ನಾರಾಯಣ್ ಬೇಸರ ವ್ಯಕ್ತಪಡಿಸಿದರು.ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸರಗೂರು ತಾಲ್ಲೂಕಿನ ಕಾಡಬೇಗೂರು ಗ್ರಾಮದ ದಲಿತ ಮಹಿಳೆ ಸವರ್ಣೀಯರಿಂದ ಹಲ್ಲೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಗಾಯಳು ಮಹಿಳೆಯನ್ನು ಬುಧವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಂತರ ಮಾತನಾಡಿದರು.ತಾಲ್ಲೂಕಿನ ಕಾಡಬೇಗೂರು ಗ್ರಾಮದ ದಲಿತ ಸಮುದಾಯದ ಸುಮಾ…

Read More

ನಾಡ ಹಬ್ಬ ಮೈಸೂರು ದಸರಾ ಆರಂಭಕ್ಕೂ ಮುನ್ನ ಪ್ಯಾಚ್ ವರ್ಕ್ಗಳನ್ನು ಮುಗಿಸಲು ನಗರ ಪಾಲಿಕೆಗೆ ಸಚಿವರ ಸೂಚನೆ

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಜನಸಂದಣಿ ಹೆಚ್ಚಾಗುವ ಕಾರಣ ಆಗಸ್ಟ್ 15ರ ಬಳಿಕ ವೈಟ್ ಟ್ಯಾಪಿಂಗ್ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು. ನಗರಪಾಲಿಕೆಯಿಂದ ಕೈಗೊಳ್ಳುವ ರಸ್ತೆ ಪ್ಯಾಚ್ ವರ್ಕ್ಗಳ ಕಾಮಗಾರಿಯನ್ನು ದಸರಾ ಆರಂಭಕ್ಕೂ ಮುನ್ನ ಮುಗಿಸಬೇಕು ಎಂದು ನಗರಾಭಿವೃದ್ದಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸೂಚಿಸಿದರು. ಬುಧವಾರ ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳು ಕೈಗೊಂಡಿರುವ ಪ್ರಮುಖ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಸರಾ ಮಹೋತ್ಸವ ಸಂದರ್ಭದಲ್ಲಿ ಹೊರಗಿನಿಂದ ಹೆಚ್ಚು…

Read More

ಕೆಎಸ್ ಆರ್ ಟಿಸಿ ಸಂಚಾರ ನಿಯಂತ್ರಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸಿಡಿ ವಿಶ್ವನಾಥ್‌ಗೆ ಬೀಳ್ಕೋಡಿಗೆ

ಮೈಸೂರು; ಕೆಎಸ್ ಆರ್ ಟಿಸಿ ಸಂಚಾರ ನಿಯಂತ್ರಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸಿಡಿ ವಿಶ್ವನಾಥ್ ರವರಿಗೆ ಬೀಳ್ಕೋಡಿಗೆ ನೀಡಲಾಯಿತು.ಮೈಸೂರಿನ ನೇಗಿಲ ಯೋಗಿ ಭವನದಲ್ಲಿ ನಡೆದ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಸಿಡಿ ವಿಶ್ವನಾಥ್ ಅವರಿಗೆ ಶಾಸಕರಾದ ಜಿ.ಟಿ ದೇವೇಗೌಡ, ಹರೀಶ್‌ಗೌಡ , ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ನಾಗೇಂದ್ರ, ನೇಗಿಲ ಯೋಗಿ ಟ್ರಸ್ಟ್ ಅಧ್ಯಕ್ಷ ರವಿಕುಮಾರ್ ನಗರಪಾಲಿಕೆ ಮಾಜಿ ಸದಸ್ಯರಾದ ಪ್ರಶಾಂತ್ ಗೌಡ , ಪ್ರೇಮಶಂಕರೇಗೌಡ ಅವರು ಸಿ.ಡಿ.ವಿಶ್ವನಾಥ್‌ರನ್ನು ಅಭಿನಂದಿಸಿ, ನಿವ್ಲತ್ತಿಯ ಜೀವನ ಸಂತೋಷಕರವಾಗಿರಲೆಚಿದು ಶುಭ…

Read More

ಯುವಜನತೆಗಾಗಿ ಹೊಸ ಅವಕಾಶ ಕಲ್ಪಿಸಲು ಮೈ ಭಾರತ್ ಪೋರ್ಟಲ್‌ನಲ್ಲಿ ನೋಂದಣಿ ಆರಂಭ : ಆರ್ ಐಶ್ವರ್ಯ

ಮೈಸೂರು; ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ದೇಶದ ಯುವಜನತೆಗಾಗಿ ವಿನೂತನ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಮೈ ಭಾರತ್ ಪೋರ್ಟಲ್ ಅನ್ನು ಅನಾವರಣಗೊಳಿಸಿದೆ. ಈ ಪೋರ್ಟಲ್ ಮೂಲಕ 15 ರಿಂದ 29 ವರ್ಷದೊಳಗಿನ ಯುವಕರಿಗೆ ಉದ್ಯೋಗಾವಕಾಶಗಳು, ಕೌಶಲ್ಯ ಅಭಿವೃದ್ಧಿ ಹಾಗೂ ಇಂಟರ್ನ್ಶಿಪ್‌ಗಳನ್ನು ಉಚಿತವಾಗಿ ಪಡೆಯುವ ಅವಕಾಶವನ್ನು ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಹೇಳಿದರು.ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಮೈ ಭಾರತ್ ತುರ್ತು ನೋಂದಣಿ ಅಭಿಯಾನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ವಿವಿಧ…

Read More

ವೈದ್ಯರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಲೇಖನಿ ಸಾಮಗ್ರಿ ವಿತರಣೆ

ಮೈಸೂರು: ಸಮಾಜದ ಒಳಿತಿಗೆ ತಮ್ಮ ಸೇವೆ ಮುಡಿಪಾಗಿಟ್ಟು ಸಾವಿರಾರು ಜನರ ಆರೋಗ್ಯ ಕಾಪಾಡುವ ವೈದ್ಯರು ನಡೆದಾಡುವ ದೇವರಿದ್ದಂತೆ ಎಂದು ಸಮಾಜ ಸೇವಕಿ ವಿಜಯಲಕ್ಷಿ÷್ಮ ಅಯ್ಯಂಗಾರ್ ಹೇಳಿದರು.ವೈದ್ಯರ ದಿನಾಚರಣೆ ಪ್ರಯುಕ್ತ ಕೆಎಂಪಿಕೆ ಟ್ರಸ್ಟ್ ವತಿಯಿಂದ ಜಯನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಲೇಖನಿ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದ ಅವರು, ವೈದ್ಯರ ಸೇವೆ ಅವಿಸ್ಮರಣೆಯ, ಆಧುನಿಕ ಜೀವನ ಪದ್ಧತಿಯಲ್ಲಿ ಎಲ್ಲರೂ ಒತ್ತಡಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.ನಂತರ ಮಾತನಾಡಿದ ವೈದ್ಯೆ ಡಾ. ರೇಖಾ ಅರುಣ್, ಭಾರತ ರತ್ನ ಡಾ.ಬಿದನ್ ಚಂದ್ರರಾಯ್…

Read More