Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಪಾಲ್ ಪಾಲಿಮರ್ಸ್ ಹಾಗೂ ರಬ್ಬರ್ ಪ್ರಾಡಕ್ಟ್ ನ 300 ಉದ್ಯೋಗಿಗಳಿಂದ ಸ್ವಯಂ ಪ್ರೇರಿತ ರಕ್ತದಾನ

ಮೈಸೂರು: ನಗರದ ಕೆ ಆರ್ ಎಸ್ ರಸ್ತೆಯಲ್ಲಿರುವ ಮೈಸೂರು ಪಾಲಿಮರ್ಸ್ ಹಾಗೂ ರಬ್ಬರ್ ಪ್ರಾಡಕ್ಟ್÷್ಸ ಸಂಸ್ಥೆಯ 45ನೇ ವರ್ಷದ ಸಂಸ್ಥಾಪನ ದಿನಾಚರಣೆ ಅಂಗವಾಗಿ 300ಕ್ಕೂ ಹೆಚ್ಚು ಸಿಬ್ಬಂದಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆದರು.ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸಿ ಡಿ ನಾಗರಾಜನ್ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಕಾರ್ಮಿಕರು ಹಾಗೂ ಮಾಲೀಕರು ಎಂಬ ಭೇದಭಾವವಿಲ್ಲ. ಸಂಸ್ಥೆಯ ಏಳಿಗೆಗಾಗಿ ದುಡಿಯುವವರೆಲ್ಲರೂ ಇಲ್ಲಿ ಮಾಲೀಕರೇ. ರಕ್ತದಾನದ ಸಾಮಾಜಿಕ ಕಾರ್ಯದ ಮೂಲಕ…

Read More

ರೂಪಾಯಿ ಮೌಲ್ಯ ವೃದ್ಧಿಗೆ ರಫುö್ತ ಪ್ರಮಾಣ ಹೆಚ್ಚಳ ಅಗತ್ಯ:ಸುರೇಶ್ ಕುಮಾರ್ ಜೈನ್

ಮೈಸೂರು: ವಿದೇಶಿಗಳಿಂದ ವಸ್ತುಗಳನ್ನು ತರಿಸಿಕೊಳ್ಳುವುದನ್ನು ಕಡಿಮೆ ಮಾಡಿ, ನಮ್ಮ ದೇಶದಲ್ಲಿ ತಯಾರಾದ ವಸ್ತುಗಳನ್ನು ಹೊರದೇಶಗಳಿಗೆ ಹೆಚ್ಚಾಗಿ ಕಳುಹಿಸಿದಾಗ ಮಾತ್ರ ಭಾರತೀಯ ರೂಪಾಯಿಯ ಮೌಲ್ಯ ವೃದ್ಧಿಯಾಗಲು ಸಾಧ್ಯ ಎಂದು ಮೈಸೂರು ಕೈಗಾರಿಕೆಗಳ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್ ಹೇಳಿದರು.ಸೋಮವಾರ ನಗರದ ಹೋಟಲ್ ಪ್ರೆಸಿಡೆಂಟ್‌ನಲ್ಲಿ ಏರ್ಪಡಿಸಿದ್ದ ರಾಜ್ಯದ ರಫುö್ತ ವಲಯವನ್ನು ವಿಸ್ತರಿಸಿ, ರಫುö್ತ ಪ್ರಮಾಣವನ್ನು ಹೆಚ್ಚಿಸುವ ರಫುö್ತ ನಿರ್ವಹಣಾ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಚೀನಾದಿಂದ ಆಮದು ಮಾಡಿಕೊಳ್ಳುವ ಸೋಲಾರ್ ಪ್ಯಾನಲ್ ಸೇರಿದಂತೆ ಇನ್ನಿತರ ವಿದೇಶಿ ಉತ್ಪನ್ನಗಳಿಗೆ…

Read More

ಚಾಮುಂಡೇಶ್ವರಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಮೈಸೂರು; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಇಂದು ನಾಡ ಶಕ್ತಿ ದೇವತೆ ಬೆಟ್ಟದ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಅವರು ದೇವಸ್ಥಾನಕ್ಕೆ ತೆರಳಿ ಜಗನ್ಮಾತೆ ಶ್ರೀಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ನಾಡಿನ ಅನ್ನದಾತ ರೈತರಿಗೆ ಹಾಗೂ ಜನತೆಗೆ ಒಳಿತಾಗಲೆಂದು ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಗ್ರಾಮಾಂತರ ನಿಕಟಪೂರ್ವ ಅಧ್ಯಕ್ಷ ಎಲ್.ಆರ್ ಮಹದೇವಸ್ವಾಮಿ ಹಾಗೂ ಅರ್ಚಕ ಸುನೀಲ್ ಉಪಸ್ಥಿತರಿದ್ದರು.

Read More

ಸೇವಾವಧಿಯಲ್ಲಿ ಮಾಡಿದ ಸಾರ್ಥಕ ಸೇವೆಯು ಎಂದಿಗೂ ಶಾಶ್ವತವಾಗಿರುತ್ತದೆ : ಆರೋಗ್ಯ ಅಧಿಕಾರಿ ಡಾ. ಶ್ರೀನಿವಾಸ್ ಬಿ. ಕೆ

ಪಿರಿಯಾಪಟ್ಟಣ : ಸೇವಾವಧಿಯಲ್ಲಿ ಮಾಡಿದ ಸಾರ್ಥಕ ಸೇವೆಯು ಎಂದಿಗೂ ಶಾಶ್ವತವಾಗಿರುತ್ತದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶ್ರೀನಿವಾಸ್.ಬಿ.ಕೆ. ಅಭಿಪ್ರಾಯ ವ್ಯಕ್ತಪಡಿಸಿದರು.  ಪಿರಿಯಾಪಟ್ಟಣ ತಾಲ್ಲೂಕು ಆರೋಗ್ಯ ಇಲಾಖೆಯ ತಾಲ್ಲೂಕು ಆರೋಗ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಬೆಂಗಳೂರಿಗೆ ವರ್ಗಾವಣೆಗೊಂಡ ಇವರನ್ನು ಇಲಾಖೆ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಶ್ರೀನಿವಾಸ್ ರವರು ನಾನು ತಾಲ್ಲೂಕು ಆರೋಗ್ಯ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಲು ಸ್ಥಳೀಯ ಶಾಸಕರಾದ ಕೆ.ವೆಂಕಟೇಶ್ ರವರು ಸಹಕಾರ ನೀಡಿದರು ಹಾಗೂ ಪ್ರಾರ್ಥಮಿಕ ಆರೋಗ್ಯ ಕೇಂದ್ರದ ವೈದ್ಯರು, ಇಲಾಖೆ…

Read More

ಎಸ್.ಜಾನಕಿ ಕುಟುಂಬದವರಿಗೆ ಸಾಂತ್ವಾನ ಹೇಳಿದ ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು; ಮೈಸೂರಿನಲ್ಲಿ ಶನಿವಾರ ನಿಧನರಾದ ಖ್ಯಾತ ಬಹುಭಾಷಾ ಗಾಯಕ ಎಸ್.ಜಾನಕಿಯವರ ನಿಧನಕ್ಕೆ ಶಾಸಕ ಟಿ.ಎಸ್.ಶ್ರಿವತ್ಸ ಅವರು ತೀವ್ರ ಸಂತಾಪ ಸೂಚಿಸಿ, ಕಂಬಿನಿ ಮಿಡಿದಿದ್ದಾರೆ.ನಗರದ ಮಹಾರಾಜ ಕಾಲೇಜ್ ಮೈದಾನಕ್ಕೆ ಆಗಮಿಸಿದ ಅವರು, ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು, ಭಾವಪೂರ್ಣ ಗೌರವ ನಮನ ಸಲ್ಲಿಸಿದರು. ಬಳಿಕ ಅಲ್ಲಿದ್ದ ಎಸ್.ಜಾನಕಿಯವರ ಕುಟುಂಬದವರಿಗೆ ಸಾಂತ್ವಾನ ಹೇಳಿ, ಧೈರ್ಯ ತುಂಬಿದರು.

Read More

ಜಾನಕಮ್ಮನ ಅಂತಿಮ ದರ್ಶನ ಪಡೆದ ಎಸ್.ಜಯಪ್ರಕಾಶ್

ಮೈಸೂರು; ಚಿತ್ರ ನಟ ಹಾಗೂ ಬಿಜೆಪಿ ಮುಖಂಡ ಎಸ್ ಜಯಪ್ರಕಾಶ್ (ಜೆಪಿ) ಹಾಗೂ ಭಗೀರಥ ಚಿತ್ರದ ನಿರ್ಮಾಪಕರಾದ ಚೇತನ್ ರಮೇಶ್ ರವರು ಇಂದು ಮೈಸೂರಿನಲ್ಲಿ ಗಾನಕೋಗಿಲೆ ಎಸ್ ಜಾನಕಿ ರವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದರು.ಮಹಾರಾಜ ಕಾಲ್ಭೆಜ್ ಮೈದಾನಕ್ಕೆ ಆಗಮಿಸಿದ ಅವರು, ಜಾನಕಮ್ಮನವರ ದರ್ಶನ ಪಡೆದು, ಭಾವುಕರಾಗಿ ನಮನ ಸಲ್ಲಿಸಿದರು. ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಜಾನಕಿ ನಿಧನಕ್ಕೆ ಸಂತಾಪ ಸೂಚಿಸಿದರು. ಬಳಿಕ ಈ ಬಾರಿ ನಡೆಯುವ ನಾಡ ಹಬ್ಬ ಮೈಸೂರು ದಸರಾ ಉತ್ಸವದಲ್ಲಿ ಎಸ್ ಜಾನಕಿ…

Read More

ಗದ್ದಿಗೆ ಮುಖ್ಯ ರಸ್ತೆಗೆ ಎಸ್.ಜಾನಕಿಯವರ ಹೆಸರಿಡಿ

ಮೈಸೂರು; ಮೈಸೂರಿನಲ್ಲಿ ನಿಧನರಾದ ಖ್ಯಾತ ಗಾಯಕಿ ಎಸ್. ಜಾನಕಿ ಅವರ ಹೆಸರನ್ನು ಗದ್ದಿಗೆ ಮುಖ್ಯ ರಸ್ತೆಗೆ ನಾಮಕರಣ ಮಾಡಬೇಕೆಂದು ಎಸ್.ಜಾನಕಿಯವರ ಕೇರ್ ಟೇಕರ್ ನವೀನ್ ಸರ್ಕಾರ ಹಾಗೂ ಮೈಸೂರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮನವಿಯನ್ನು ಸಿಎಂ ಈಡೇರಿಸಿದರೆ, ಜಾನಕಿ ಅವರಿಗೆ ಮೈಸೂರು ಮೇಲಿದ್ದ ಪ್ರೀತಿ ಸಾರ್ಥಕವಾಗಲಿದೆ ಎಂದು ಹೇಳಿದರು.ತಮ್ಮ ಬಗ್ಗೆ ಸಾರ್ವಜನಿಕವಾಗಿ ಅಪಪ್ರಚಾರ ನಡೆಯುತ್ತಿದೆ ಎಂದು ತಿಳಿದಾಗ ಜಾನಕಮ್ಮನವರು ತೀವ್ರ ಬೇಸರಗೊಂಡಿದ್ದರು. ಜನಗಳ ಮಧ್ಯೆ ಇರಲು ಇಷ್ಟವಿಲ್ಲ ಎಂದು ಹೇಳಿ, ಕಾಡಿಗೆ…

Read More

ಗಾನ ಕೋಗಿಲೆ ಜಾನಕಿ ಅಮ್ಮನವರ ಅಗಲಿಕೆಗೆ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಸಂತಾಪ

ಮೈಸೂರು: ಪ್ರಖ್ಯಾತ ಹಿನ್ನೆಲೆ ಗಾಯಕಿ, `ಗಾನ ಕೋಗಿಲೆ’ ಎಂದೇ ಖ್ಯಾತರಾದ ಜಾನಕಿ ಅಮ್ಮನವರ ಅಗಲಿಕೆಗೆ ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.“ಜಾನಕಿ ಅಮ್ಮನವರ ಅಗಲಿಕೆ ನಮಗೆ ಅಪಾರ ದುಃಖವನ್ನು ಉಂಟುಮಾಡಿದೆ. ಅವರು ತಮ್ಮ ಕೊನೆಯ ದಿನಗಳಲ್ಲಿ ಮೈಸೂರಿಗೆ ಬಂದು ಇಲ್ಲೇ ನೆಲೆಸಿದ್ದರು. ಆಗಾಗ ಆಶ್ರಮಕ್ಕೆ ಬಂದು ಸ್ವಾಮೀಜಿಯವರ ದರ್ಶನ ಪಡೆಯುತ್ತಿದ್ದರು. ಕೆಲವೊಮ್ಮೆ ನನ್ನೊಂದಿಗೆ ಮಾತನಾಡಲು ಸಾಧ್ಯವಾಗದಿದ್ದರೂ, ಕೇವಲ ದರ್ಶನ ಪಡೆದುಕೊಂಡು ಹೋಗುತ್ತಿದ್ದರು,” ಎಂದು ಹಳೆಯ ದಿನಗಳನ್ನು ನೆನಪಿಸಿಕೊಂಡರು.ಸ್ವಾಮೀಜಿಯವರ ಕುರಿತು ಹಾಡಿದ್ದ…

Read More

ಖ್ಯಾತ ಬಹುಭಾಷಾ ಗಾಯಕಿ ಎಸ್.ಜಾನಕಿ ವಿಧಿ ವಶ

ಮೈಸೂರಿನಲ್ಲಿಯೇ ಎಸ್.ಜಾನಕಿಯವರ ಅಂತ್ಯಕ್ರಿಯೆ ಮೈಸೂರು; ಖ್ಯಾತ ಬಹುಭಾಷಾ ಗಾಯಕಿ ಎಸ್.ಜಾನಕಿ ಅವರು ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಮೂಲತ ಆಂಧ್ರಪ್ರದೇಶದವರಾದ ಅವರು, ಇತ್ತೀಚೆಗೆ ಮೈಸೂರಿನ ಬೋಗಾದಿಯಲ್ಲಿ ನೆಲೆಸಿದ್ದರು. ಸಂಬAಧಿಕರ ಮನೆಯಲ್ಲಿ ವಾಸವಿದ್ದ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ವರ್ಷ ಮಗನನ್ನು ಕಳೆದುಕೊಂಡಿದ್ದರು. ಇಂದು ಮಧ್ಯಾಹ್ನ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಮೈಸೂರಿನ ಅಪೋಲೋ ಆಸ್ಪತ್ರೆಗೆ ಮಧ್ಯಾಹ್ನ 12.49ರ ವೇಳೆಯಲ್ಲಿ ಕರೆ ತಂದು ದಾಖಲಿಸಲಾಯಿತು. ತಕ್ಷಣವೇ ಅವರನ್ನು ಪರೀಕ್ಷಿಸಿದ ವೈದ್ಯರು ಐಸಿಯುಗೆ…

Read More

ಭೂ ಮಾಫಿಯಾ ಕೈವಾಡ; ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿರುವ ಜಮೀನಿನ ಪಾಲುದಾರ ರೈತರ ಮೇಲೆ ಹಲ್ಲೆ ಸುಳ್ಳು ಪ್ರಕರಣ ದಾಖಲು.

ಪಿರಿಯಾಪಟ್ಟಣ : ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಭೂಮಾಫಿಯಾ ಇಂದು ಗ್ರಾಮಾಂತರ ಪ್ರದೇಶಗಳಿಗೂ ನುಗ್ಗಿದ್ದು ರೈತರ ಬದುಕು ಬೀದಿ ಪಾಲಾಗುತ್ತಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ರಾವಂದೂರು ಗ್ರಾಮದಲ್ಲಿ ಆರ್.ಪಿ .ಹೊನ್ನಪ್ಪ ಎಂಬುವರ ಕುಟುಂಬಕ್ಕೆ ಸೇರಿದ ಜಮೀನನ್ನು ಕುಟುಂಬದ ಆರ್.ಎಚ್. ಚೆನ್ನಬಸಪ್ಪ ಎಂಬುವರು ಇತರೆ ಸಹೋದರ ಸಹೋದರಿಯರಿಗೆ ತಿಳಿಸದೆ ತಮ್ಮ ಜಮೀನನ್ನು ಅಮೃತೇಶ್ ಎಂಬುವರಿಗೆ ಮಾರಾಟ ಮಾಡಲು ಯತ್ನಿಸಿ, ಅಗ್ರಿಮೆಂಟ್ ಮಾಡಿಕೊಟ್ಟಿರುತ್ತಾರೆ. ಈ ವಿಚಾರ ತಿಳಿದ ಕುಟುಂಬದ ಮತ್ತಿತರರು ಅವರ ಪಾಲಿಗಾಗಿ ಪಿರಿಯಾಪಟ್ಟಣದ ನ್ಯಾಯಾಲಯದಲ್ಲಿ ಪ್ರಕರಣ…

Read More