Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರು ಜಿಲ್ಲೆಯ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ;23,49,006 ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿದ್ದು,ಶೇ 83.90% ರಷ್ಟು ಸಾಧನೆ

ಮೈಸೂರು; ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 (ಎಸ್‌ಐಆರ್) ಪ್ರಕ್ರಿಯೆಯು ಅತ್ಯಂತ ಚುರುಕಿನಿಂದ ಸಾಗಿದ್ದು ಜುಲೈ 8 ರವೆರೆಗೆ 23,49,006 ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿದ್ದು,ಶೇ 83.90% ರಷ್ಟು ಸಾಧನೆಯಾಗಿದೆ.ಜಿಲ್ಲೆಯಲ್ಲಿ ಒಟ್ಟು 27,99,693 ಮತದಾರರಿದ್ದು, 2,915 ಮತಗಟ್ಟೆಗಳು ಇರುತ್ತದೆ. ಜಿಲ್ಲೆಯಲ್ಲಿ ಮತಗಟ್ಟೆಗಳ ಪೈ ಕಿ 927 (31.80%) ಮತಗಟ್ಟೆಗಳಲ್ಲಿ 100% ಫಾರ್ಮ್ ವಿತರಣೆ ಆಗಿದೆ.726 (24.90%) ಮತಗಟ್ಟೆಗಳಲ್ಲಿ 90% ಕ್ಕಿಂತ ಅಧಿಕ ವಿತರಣೆಯಾಗಿದೆ.11,419 ಮತದಾರರು ಸ್ವತಃ ಆನ್‌ಲೈನ್ ಮೂಲಕ ಫಾರ್ಮ್ಗಳನ್ನು ಸಲ್ಲಿಸಿದ್ದಾರೆ.ಜಿಲ್ಲೆಯಲ್ಲಿ ವಿತರಿಸಲಾದ ಫಾರ್ಮ್ಗಳ ಪೈಕಿ ಇದುವರೆಗೆ ಒಟ್ಟು…

Read More

ಹೆಚ್ .ಡಿ. ಕೋಟೆ ವಕೀಲರ ಸಂಘದ ನೂತನ ಅದ್ಯಕ್ಷ ರಿಗೆ ಸನ್ಮಾನ

ಮೈಸೂರು; ಹೆಚ್ .ಡಿ. ಕೋಟೆ ವಕೀಲರ ಸಂಘದ ನೂತನ ಅದ್ಯಕ್ಷರಾಗಿ ಆಯ್ಕೆಯಾದ ನಾಗೇಶ್ ರವರನ್ನು ಮೈಸೂರು ವಕೀಲರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.  ಈ ವೇಳೆ ಎಂ ಮಹದೇವಸ್ವಾಮಿ,ಸಿ.ನಾಗರಾಜ್, ಸನತ್ ಕುಮಾರ್,ಪಡುವಾರಹಳ್ಳಿ ಎಂ ರಾಮಕೃಷ್ಣ,ಮಂಜು ಲುಮಾರ್,ಸಿದ್ದೇಗೌಡ,ರವಿ,ಬಸವರಾಜು, ಜಗದೀಶ್ ತಿಮ್ಮಾಚಾರಿ,ಮಣಿಕಂಠ,ಮಧು,ರಾಜೇಶ್ ರವರಿದ್ದರು.

Read More

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಾರ್ಪೊರೇಟ್ ಸಹಯೋಗ

ಮೈಸೂರು: ಜಿಲ್ಲೆಯ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸುವ ಮತ್ತು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸಮುದಾಯ ಮತ್ತು ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ಸಿ.ಸಿ.ಎಸ್.ಆರ್ ನಿಧಿಯನ್ನು ಬಳಸಿಕೊಳ್ಳುವ ಕುರಿತು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಿ. ಉದಯಕುಮಾರ್ ಅವರು ಪ್ರಸಕ್ತ ಯೋಜನೆಯ ಮುಖ್ಯ ಉದ್ದೇಶಗಳು ಹಾಗೂ ಈ ಯೋಜನೆಯ ಭಾಗವಾಗಿ ಸ್ಥಾಪನೆ ಮಾಡಬೇಕಾಗಿರುವ ಸಿ.ಸಿ.ಎಸ್.ಆರ್ ಕೋಶ ಹಾಗೂ ನಮ್ಮ…

Read More

30 ಪ್ರಕರಣ ಭೇದಿಸಿದ ಪೊಲೀಸರಿಂದ 35 ಆರೋಪಿಗಳ ಬಂಧನ, 1.55 ಕೋಟಿ ರೂ ಮೌಲ್ಯದ ವಸ್ತುಗಳು ವಶ

ಮೈಸೂರು : ಜಿಲ್ಲಾ ವ್ಯಾಪ್ತಿಯಲ್ಲಿ ನಡೆದ ದರೋಡೆ, ಮನೆಗಳ್ಳತನ, ಬೈಕ್ ಕಳ್ಳತನ ಪ್ರಕರಣ ಸೇರಿ 30 ಪ್ರಕರಣಗಳನ್ನು ಭೇದಿಸಿರುವ ಮೈಸೂರಿನ ಪೊಲೀಸರು 35 ಆರೋಪಿಗಳನ್ನು ಬಂಧಿಸಿ, 1.55 ಕೋಟಿ ರೂ ಮೌಲ್ಯಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ತಿಳಿಸಿದರು.ಬುಧವಾರ ನಗರದ ತಮ್ಮ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಧಿತರಿAದ 1,55,12,300 ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.ಇದೇ ತಿಂಗಳ 1ರಂದು ವ್ಯಾಪಾರಿಯೊಬ್ಬರು ಚಿನ್ನ ಮಾರಿ 85 ಲಕ್ಷ ರೂ.ನ್ನು ಎರಡು…

Read More

ಮಕ್ಕಳ ಗ್ರಾಮ ಸಭೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯ ಬಗ್ಗೆ ಜಾಗೃತಿ ಮೂಡಿಸಿ: ಐಶ್ವರ್ಯ ಆರ್

ಮೈಸೂರು: ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯು ಗ್ರಾಮ ಮಟ್ಟದಿಂದ ನಡೆಯಬೇಕು. ಮಕ್ಕಳ ಗ್ರಾಮ ಸಭೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯ ಬಗ್ಗೆ ಜಾಗೃತಿ ಮೂಡಿಸಿ ಎಂದು ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ತಿಳಿಸಿದರು.ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಹಾಗೂ ಕಾರ್ಯಪಡೆ ಸಮಿತಿಯ ಸಭೆ ನಡೆಸಿ ಮಾತನಾಡಿದ ಅವರು, ಬಾಲಕಾರ್ಮಿಕರನ್ನು ಪತ್ತೆ ಹಚ್ಚಲು ಅಧಿಕಾರಿಗಳು ಪ್ರತಿ ಮಾಹೆ ನಿಗದಿಪಡಿಸಿರುವ ಕನಿಷ್ಠ 15 ತಪಾಸಣೆ ಅಥವಾ ದಾಳಿಗಳನ್ನು ನಡೆಸಿ…

Read More

ನಗರ ಪಾಲಿಕೆ ಆಯುಕ್ತರಾಗಿ ಎಂ.ಕೆ.ಸವಿತಾ ಅಧಿಕಾರ ಸ್ವೀಕಾರ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ಎಂ.ಕೆ.ಸವಿತಾ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಅವರು ಇಂದು ಅಧಿಕಾರ ವಹಿಸಿಕೊಂಡು, ನಗರ ಆಯುಕ್ತರಾಗಿದ್ದ ಶೇಖ್ ತಸ್ವೀರ್ ಆಸಿಫ್ ಅವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ. ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರಾ ಗಿದ್ದ ಎಂ.ಕೆ. ಸವಿತಾ ಅವರನ್ನು ಆಯುಕ್ತರ ಹುದ್ದೆಗೆ ನೇಮಿಸಲಾಗಿದೆ. ಅವರು ನಗರಪಾಲಿಕೆಯ ಕಚೇರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಆಯುಕ್ತ ಶೇಖ್ ತಸ್ವೀರ್ ಆಸಿಫ್ ಅಧಿಕಾರ ಹಸ್ತಾಂತರಿಸಿದರು. ಸವಿತಾ ಅವರು ಈ ಹಿಂದೆ ತಿ.ನರಸೀಪುರ ತಾಲ್ಲೂಕು…

Read More

ಅಸಹಾಯಕರಾಗಿ ಬಿದ್ದಿದ್ದ ವೃದ್ಧೆಯ ರಕ್ಷಣೆ

ಮೈಸೂರು; ನಗರದ ಪೊಲೀಸ್ ಆಯುಕ್ತರ ಕಚೇರಿ ಬಳಿ ಅಸಹಾಯಕರಾಗಿ ಬಿದ್ದಿದ್ದ ನಿಂಗಮ್ಮ ಎಂಬ ವಯೋವೃದ್ಧೆಯನ್ನು `ಅಕ್ಕ ಪಡೆ’ಯ ಸಿಬ್ಬಂದಿಗಳು ತಕ್ಷಣವೇ ರಕ್ಷಿಸಿದ್ದಾರೆ. ಬಳಿಕ ಅವರನ್ನು ವಿಚಾರಿಸಿದಾಗ, ಅವರು ರೈಲ್ವೆ ಇಲಾಖೆಯ ನಿವೃತ್ತ ನೌಕರರೆಂದೂ ಮತ್ತು ಅವರ ಮನೆ ವೀರನಗೆರೆ ಬಳಿ ಇರುವುದಾಗಿಯೂ ತಿಳಿದುಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಅಕ್ಕ ಪಡೆಯ ಸಿಬ್ಬಂದಿ ವೃದ್ಧೆಯನ್ನು ಸುರಕ್ಷಿತವಾಗಿ ಅವರ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.

Read More

ವಿಜಯ ವಿಠಲ ವಿದ್ಯಾಶಾಲೆಯಲ್ಲಿ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ, ಉಚಿತ ನೇತ್ರ ತಪಾಸಣಾ ಶಿಬಿರ

ಮೈಸೂರು; ನಗರದ ವಿಜಯ ವಿಠಲ ವಿದ್ಯಾಶಾಲೆಯಲ್ಲಿ, 2026-27ನೇ ಸಾಲಿನ ಇಂಟರ್ಯಾಕ್ಟ್ ಕ್ಲಬ್‌ನ ಪದಗ್ರಹಣ ಸಮಾರಂಭವು ಶಾಲಾ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು.ಈ ಸಮಾರಂಭಕ್ಕೆ ರೋಟರಿ ಮೈಸೂರಿನ ಅಧ್ಯಕ್ಷ ಆರ್.ಟಿ.ಎನ್. ಎಂ. ಎನ್. ವೆಂಕಟೇಶ್ ಅವರು ಮುಖ್ಯ ಅತಿಥಿಗಳಾಗಿ ಮತ್ತು ಪದಗ್ರಹಣ ಅಧಿಕಾರಿಯಾಗಿ ಆಗಮಿಸಿದ್ದರು. ರೋಟರಿ ಮೈಸೂರಿನ ಯುವ ಸೇವಾ ವಿಭಾಗದ ನಿರ್ದೇಶಕರಾದ ಆರ್.ಟಿ.ಎನ್. ಡಾ. ನಂಜರಾಜೇ ಎಸ್. ಅರಸ್ ಅವರು ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು. ಡಾ. ಅಗರ್ವಾಲ್ಸ್ ಕಣ್ಣಿನ ಆಸ್ಪತ್ರೆಯ ಕ್ಲಿನಿಕಲ್ ಸೇವೆಗಳ ಮುಖ್ಯಸ್ಥ ಡಾ. ಪವನ್ ವಿ….

Read More

ಯೋಜನೆಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ; ಜಿ.ಪಂ ಸಿಇಒ ಎಚ್ಚರಿಕೆ

• ಜೂನ್ ತಿಂಗಳಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸಿದ ಗ್ರಾಪಂಗಳಿಗೆ ಪ್ರಶಸ್ತಿ ಪತ್ರ ವಿತರಣೆಮೈಸೂರು: ಇ-ಹಾಜರಾತಿ, ಸಕಾಲ,ಮಾನವ ದಿನಗಳ ಸೃಜನೆ,ಕಂದಾಯ ವಸೂಲಾತಿ ಸೇರಿದಂತೆ ಇನ್ನಿತರ ಯೋಜನೆಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಯುಕೇಶ್‌ಕುಮಾರ್ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.ಬುಧವಾರ ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲೆಯ 255 ಗ್ರಾಪಂಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ,ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬAಧಿಸಿದAತೆ ರಾಜ್ಯದ…

Read More

ಹೆಚ್ಚು ಅಂಕ ಪಡೆದ ಸರ್ಕಾರಿ ನೌಕರರ ಸಂಘದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ 

ಸರ್ಕಾರಿ ನೌಕರರ ಸಂಘದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ : ಹೊಸಹಳ್ಳಿ ಕೃಷ್ಣೇಗೌಡ ಪಿರಿಯಾಪಟ್ಟಣ : ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪಿರಿಯಾಪಟ್ಟಣ ಅಧ್ಯಕ್ಷ ಹೊಸಹಳ್ಳಿ ಕೃಷ್ಣೇಗೌಡ ತಿಳಿಸಿದರು. ಪಟ್ಟಣದ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜುಲೈ 11 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ…

Read More