Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಬೆಟ್ಟದಪುರ ಸರ್ಕಾರಿ ಐಟಿಐ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ  

ಸರ್ಕಾರಿ ಶಾಲಾ ಕಾಲೇಜುಗಳ ಉಳಿವಿಗಾಗಿ ಕೈ ಜೋಡಿಸಿ:  ಸೋಮಶೇಖರ್  ಪಿರಿಯಾಪಟ್ಟಣ : ಸರ್ಕಾರಿ ಶಾಲಾ ಕಾಲೇಜುಗಳ ಉಳಿವಿಗಾಗಿ ಕೈ ಜೋಡಿಸಿ ಎಂದು ಬೆಟ್ಟದಪುರ ಸರ್ಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ್ ತಿಳಿಸಿದರು  ತಾಲ್ಲೂಕಿನ ಬೆಟ್ಟದಪುರ ಸರ್ಕಾರಿ ಐಟಿಐ ಕಾಲೇಜಿನಲ್ಲಿ ನಡೆದ ವನ ಮಹೋತ್ಸವ, ಶಾರದ ಪೂಜೆ, ಪೋಷಕರ ಸಭೆ ಹಾಗೂ ಹಿರಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬೆಟ್ಟದಪುರ ಸರ್ಕಾರಿ ಐಟಿಐ ಕಾಲೇಜು ವಿದ್ಯಾರ್ಥಿಗಳಿಗೆ ಉತ್ತಮವಾಗಿ ತರಬೇತಿ ನೀಡುವುದರ ಜೊತೆಗೆ ಬೆಂಗಳೂರು ಮೈಸೂರು ಕಡೆಗಳಲ್ಲಿ…

Read More

ನಗರದಲ್ಲಿ ಪೊಲೀಸರಿಂದ ರೌಡಿಗಳ ಪರೇಡ್

ಮೈಸೂರು; ನಗರದಲ್ಲಿ ಪೊಲೀಸರು ರೌಡಿಗಳ ಪರೇಡ್ ನಡೆಸಿದರು.ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರ ಸೂಚನೆಯಂತೆ, ಡಿಸಿಪಿಗಳಾದ ಡಾ:ಹರ್ಷ ಪ್ರಿಯಂವದ ಮತ್ತು ಶಿ ಸುಂದರ್ ರಾಜ್ ಕೆ.ಎಸ್ ಅವರ ನೇತೃತ್ವದಲ್ಲಿ ವಿಜಯನಗರ ಉಪವಿಭಾಗದ ರೌಡಿಗಳ ಪರೇಡ್ ನಡೆಸಲಾಯಿತು. ರೌಡಿ ನಿಗ್ರಹ ದಳದ ಈ ಕಾರ್ಯಾಚರಣೆಯಲ್ಲಿ, ಯಾವುದೇ ಕಾನೂನು ಬಾಹಿರ ಚಟುವಟಿಕೆ ಅಥವಾ ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಯಿತು. ಅಲ್ಲದೆ, ತಪುö್ಪ ಹಾದಿ ಬಿಟ್ಟು ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಬದುಕುವಂತೆ ಬುದ್ಧಿವಾದ ಹೇಳಲಾಯಿತು.

Read More

ಡಿ.ಬನುಮಯ್ಯ ಯುವ ಬ್ರಿಗೇಡ್ ವತಿಯಿಂದ ಬನುಮಯ್ಯ ಜಯಂತಿ ಆಚರಣೆ

ಮೈಸೂರು; ಧರ್ಮ ಪ್ರಕಾಶ್ ರಾವ್ ಬಹದ್ದೂರ್ ಡಿ ಬನುಮಯ್ಯನವರ 166 ನೇ ಜಯಂತಿಯನ್ನು ಇಂದು ಬನುಮಯ್ಯ ಕಾಲೇಜಿನ ಆವರಣದಲ್ಲಿ ಆಚರಿಸಲಾಯಿತು. ಬನುಮಯ್ಯ ಅವರ ಪುತ್ಥಳಿಗೆ ಶಾಸಕ ಟಿ.ಎಸ್ ಶ್ರೀವತ್ಸ ಅವರು ಮಾಲಾರ್ಪಣೆ ಮಾಡುವ ಮೂಲಕ ಜಯಂತಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು ಮತ್ತು ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು ವಿಶೇಷವಾಗಿ ಈ ಬಾರಿಯ ಎಸ್…

Read More

ಪುಸ್ತಕಗಳು ಜ್ಞಾನ, ಸಂಸ್ಕಾರ, ಸೃಜನಶೀಲತೆ ಮತ್ತು ಚಿಂತನೆಯನ್ನು ಬೆಳೆಸುವ ಅತ್ಯುತ್ತಮ ಸಾಧನಗಳಾಗಿವೆ; ಸಂಸದ ಡಾ. ಸಿ.ಎನ್. ಮಂಜುನಾಥ್

ಮೈಸೂರು: ಪುಸ್ತಕಗಳು ಜ್ಞಾನ, ಸಂಸ್ಕಾರ, ಸೃಜನಶೀಲತೆ ಮತ್ತು ಚಿಂತನೆಯನ್ನು ಬೆಳೆಸುವ ಅತ್ಯುತ್ತಮ ಸಾಧನಗಳಾಗಿವೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ. ಸಿ.ಎನ್. ಮಂಜುನಾಥ್ ಹೇಳಿದರು.ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಮೈಸೂರು ಒರೇಟರ್ಸ್ ಫೋರಂ ಚಾರಿಟೇಬಲ್ ಟ್ರಸ್ಟ್ ಹಾಗೂ ಮೈಸೂರು ಬುಕ್ ಕ್ಲಬ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ 10ನೇ `ಮೈಸೂರು ಸಾಹಿತ್ಯ ಸಂಭ್ರಮ 2026′ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಂತ್ರಜ್ಞಾನ ಎಷ್ಟೇ ವೇಗವಾಗಿ ಬೆಳೆಯುತ್ತಿದ್ದರೂ ಪುಸ್ತಕಗಳ ಮಹತ್ವ ಎಂದಿಗೂ ಕಡಿಮೆಯಾಗುವುದಿಲ್ಲ. ಪುಸ್ತಕಗಳು ಜ್ಞಾನ, ಸಂಸ್ಕಾರ,…

Read More

ಜುಲೈ 5 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಕರೆಂಟ್ ಇರಲ್ಲಮೈಸೂರು: ಚಾಮುಂಡಿಪುರ0 ಉಪವಿಭಾಗದ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಕಾಮಗಾರಿ ಹಾಗೂ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಜು. 5 ರಿಂದ 7 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.ಜುಲೈ 5 ರಂದು ಕೋರ್ಟ್ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು: ಗೀತಾ ರಸ್ತೆ, ದೇವ ಪಾರ್ಥಿವ ರಸ್ತೆ, ರಾಮಸ್ವಾಮಿ ವೃತ್ತ, ಕೋರ್ಟ್ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು.ಜುಲೈ 6 ರಂದು ಕನಕಗಿರಿ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು: ಕನಕಗಿರಿ, ಸುಯೇಜ್…

Read More

ಎಚ್.ಡಿ.ಕೋಟೆ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ವಕೀಲ ಆರ್.ನಾಗೇಶ್ ಆಯ್ಕೆ,

2 ಮತದ ರೋಚಕ ಜಯ, ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವ ವಕೀಲರು. ಎಚ್.ಡಿ.ಕೋಟೆ : ತಾಲ್ಲೂಕು ವಕೀಲರ ಸಂಘದ ನೂತನ ಆಡಳಿತ ಮಂಡಳಿಗೆ ಶನಿವಾರ ಚುನಾವಣೆ ನಡೆದು ವಕೀಲ ಆರ್.ನಾಗೇಶ್ 68 ಮತಗಳನ್ನು ಪಡೆಯುವ ಮೂಲಕ ಪ್ರತಿ ಸ್ಪರ್ಧಿ ಹಿರಿಯ ವಕೀಲ ಡಿ.ಆರ್.ಮಹೇಶ್ (66) ಅವರ ವಿರುದ್ಧ 2 ಮತಗಳ ಅಂತರದಲ್ಲಿ ರೋಚಕ ಜಯಗಳಿಸುವ ಮೂಲಕ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. ತಾಲ್ಲೂಕು ವಕೀಲರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆರ್.ನಾಗೇಶ್ ಹೆಸರು ಘೋಷಣೆ ಆಗುತ್ತಿದ್ದಂತೆ ಅವರನ್ನು ಬೆಂಬಲಿಸಿದ್ದ ವಕೀಲರ…

Read More

ಶ್ರೀರಾಘವೇಂದ್ರಸ್ವಾಮಿಗಳ ಪಂಚಲೋಹ ಶಿಲಾ ಮತ್ತು ಬೃಂದಾವನ ಪ್ರತಿಷ್ಠಾಪನಾ ಕಾರ್ಯಕ್ರಮ

ಮೈಸೂರು; ಶ್ರೀರಾಘವೇಂದ್ರಸ್ವಾಮಿಗಳ ಪಂಚಲೋಹ ಶಿಲಾ ಮತ್ತುಬೃಂದಾವನ ಪ್ರತಿಷ್ಠಾಪನಾ ಕಾರ್ಯಕ್ರಮಮೈಸೂರಿನ ರಾಮಕೃಷ್ಣನಗರ ವಿವೇಕಾನಂದರಸ್ತೆಯಲ್ಲಿರುವ ಶ್ರೀದೇವಿ ಭೂದೇವಿ ಸಮೇತ ಶ್ರೀನಿವಾಸ ಗಣಪತಿವಾಯುದೇವ ದೇವಸ್ಥಾನದ ಆವರಣದಲ್ಲಿ ಜುಲೈ 5 ರಂದು ನಡೆಯಲಿದೆ.ಭಾನುವಾರ ಬೆಳಿಗ್ಗೆ 8.30ಕ್ಕೆ ಕಾರ್ಯಕ್ರಮವು ನೆರವೇರಲಿದೆ ಎಂದು ಟ್ರಸ್ಟಿಗಳಾದ ಸುಧಾರಾವ್, ಹರೀಶ್ರಾವ್, ಗುರುರಾಜರಾ ಪ್ರಕಟಣೆಯಲ್ಲಿತಿಳಿಸಿದ್ದಾರೆ.

Read More

ವಿಬಿ-ಜಿ ರಾಮ್ ಜಿ ಜಾರಿ, ಕೂಲಿ ದರ ಹೆಚ್ಚಳ: ಜಿ.ಪಂ ಸಿಇಓ ಎಸ್.ಯುಕೇಶ್ ಕುಮಾರ್

ಮೈಸೂರು: ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ (ಮ-ನರೇಗಾ) ಯೋಜನೆಗೆ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ ) ಯೋಜನೆಯು ಜುಲೈ 1 ರಿಂದಲೇ ಅಧಿಕೃತವಾಗಿ ಜಾರಿಗೆ ಬಂದಿದ್ದು, ಅದೇ ದಿನವೇ ಕೇಂದ್ರ ಸರ್ಕಾರ ಯೋಜನೆಯಡಿ ದೊರೆಯುವ ಪರಿಷ್ಕöÈತ ಕೂಲಿ ದರ ಏರಿಕೆ ಮಾಡಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್ .ಯುಕೇಶ್ ಕುಮಾರ್…

Read More

ಪುರುಷರಿಗೂ ನಿಮ್ಮ ಸಾಧನೆ ಸ್ಪೂರ್ತಿ : ರವಿಶಂಕರ್

ಮೈಸೂರು: ಮಹಿಳೆಯಾಗಿ ಜಮ್ಮಡ ಪ್ರೀತ್ ಅಪ್ಪಯ್ಯರ ಉತ್ಸಾಹ, ಆಶಯ ನೋಡಿದರೆ ಪುರುಷರಿಗೂ ಮಾದರಿಯಾಗಿದ್ದಾರೆ ಎಂದು ಲಕ್ಷಿಪುರಂ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ರವಿಶಂಕರ್ ತಿಳಿಸಿದರು.ಕೆಎಂಪಿಕೆ ಚಾರಿಟಬಲ್ ಟ್ರಷ್ಟ್ ವತಿಯಿಂದ ನಗರದ ಚಾಮುಂಡಿಪುರAನ ಅಪೂರ್ವಹೋಟೆಲ್ ನಲ್ಲಿ ಆಯೋಜಿಸಿದ್ದ ಬೆಂಗಳೂರು ವಿಶ್ವ ವಿದ್ಯಾನಿಲಯದ ಶೂಟಿಂಗ್ ರೇಂಜ್ ನಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ ಸಹಕಾರದೊಂದಿಗೆ ಕರ್ನಾಟಕ ರಾಜ್ಯ ರೈಫೆಲ್ ಅಸೋಸಿಯೇಷನ್(ಕೆಎಸ್‌ಆರ್‌ಎ) ವತಿಯಿಂದ ನಡೆದ 14ನೇ ರಾಜ್ಯ ಶೂಟಿಂಗ್ ಸ್ಪರ್ಧೆ ಮತ್ತು ಚಾಂಪಿಯನ್ ಶಿಪ್ 2026ರಲ್ಲಿ ಎರಡು ಚಿನ್ನದ ಪದಕಗಳಿಸಿದ ಮೈಸೂರಿನವರಾದ ಜಮ್ಮಡ…

Read More

ಮೈಸೂರಿನ ನರಸಿಂಹರಾಜ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ; ಸಂಸದ ಯದುವೀರ್

ಮೈಸೂರು: ಮೈಸೂರಿನ ನರಸಿಂಹರಾಜ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದರು.ಶನಿವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತಿದೆ. ಈ ಭಾಗದಲ್ಲಿ ಸುಸೂತ್ರವಾಗಿ ಎಸ್‌ಐಆರ್ ಪ್ರಕ್ರಿಯೆ ನಡೆಯಲು ಪೊಲೀಸ್ ಭದ್ರತೆಯ ಅಗತ್ಯವಿದೆ ಎಂದು ಹೇಳಿದರು. ಅಲ್ಪಸಂಖ್ಯಾತರೇ ಹೆಚ್ಚಿರುವ ಎನ್.ಆರ್. ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮಾನದಂಡದAತೆ ನಡೆಯುತ್ತಿಲ್ಲ. ಮಸೀದಿ, ಸಮುದಾಯ ಭವನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನರನ್ನು…

Read More