ಅಕ್ರಮ ಬಾಂಗ್ಲಾದೇಶಿ ವಲಸಿಗರ ಮಾಹಿತಿ ನೀಡಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧವೇ ಕೇಸ್ ದಾಖಲಿಸಿರುವುದನ್ನು ಖಂಡಿಸಿ ಪ್ರತಿಭಟನೆ
ಮೈಸೂರು: ನಗರದ ರೈಲು ನಿಲ್ದಾಣದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಮಾಹಿತಿ ನೀಡಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧವೇ ಕೇಸ್ ದಾಖಲಿಸಿರುವುದನ್ನು ಖಂಡಿಸಿ ಮಂಗಳವಾರ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ನೂರಾರು ಮಂದಿ ಪ್ರತಿಭಟನಾಕಾರರು, ರೈಲ್ವೆ ಪೊಲೀಸರು, ಪೊಲೀಸ್ ಇಲಾಖೆ ಹಾಗೂ ಗೃಹ ಇಲಾಖೆಯ ವಿರುದ್ಧ ನಾನಾ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಅಕ್ರಮ ವಲಸಿಗರ ವಿರುದ್ಧ ಸಮಗ್ರ ತನಿಖೆ ನಡೆಸದೆ, ಅವರನ್ನು ಹಿಡಿದುಕೊಟ್ಟ ಕಾರ್ಯಕರ್ತರ ಮೇಲೆಯೇ…