ಎಸ್.ಸಿ.ಬಸವರಾಜು ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಲು ಒತ್ತಾಯಿಸಿ ಜೂನ್ 15 ರಂದು ಪ್ರತಿಭಟನೆ; ದ್ಯಾವಪ್ಪ ನಾಯಕ
ಮೈಸೂರು; ಕಾಂಗ್ರೆಸ್ ಮುಖಂಡ ಎಸ್.ಸಿ. ಬಸವರಾಜು ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವಂತೆ ಒತ್ತಾಯಿಸಿ ಜೂನ್ 15 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ದ್ಯಾವಪ್ಪ ನಾಯಕ ತಿಳಿಸಿದರು.ಶುಕ್ರವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ವಿಭಾಗದಲ್ಲಿ ನಾಯಕ ಸಮುದಾಯವು ಸುಮಾರು 9ರಿಂದ 10 ಲಕ್ಷ ಜನ ಸಂಖ್ಯೆಯಿದ್ದು, ಇಲ್ಲಿಯವರೆಗೆ ನಮ್ಮ ಸಮುದಾಯದ ಹೆಚ್ಚಿನ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತ ಬಂದಿದ್ದರೂ ಕೂಡ, ಇಂದಿನವರೆಗೂ…