This is a title
ಮಳೆ ತಂದ ಅನಾಹುತ.. ರೈತರ ಬದುಕು ಅತಂತ್ರ; ಮನೆ ಮೇಲೆ ಬಿದ್ದ ತೆಂಗಿನ ಮರ.. ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರು
ಮೈಸೂರು; ಶುಕ್ರವಾರ ತಡರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಅನೇಕ ಗ್ರಾಮಗಳಲ್ಲಿ ಮಳೆ ಹಾನಿ ಸಂಭವಿಸಿದ್ದು ಜನಜೀವನ ಅಸ್ತವ್ಯತಗೊಂಡಿದ್ದು, ರೈತರ ಬದುಕು ಮುರಾಬಟ್ಟೆಯಾಗಿದೆ.ಅಬ್ಬರಿಸಿ ಬೊಬ್ಬಿರಿದ ಗಾಳಿ ಸಹಿತ ಮಳೆಗೆ ಹೆಚ್.ಡಿ.ಕೋಟೆ ತಾಲೂಕಿನ ತೊರವಳ್ಳಿ ಗ್ರಾಮದ ಕೆಂಪನಾಯಕ ಅವರ ಮನೆಯ ಮೇಲ್ಛಾವಣಿ ಹಾರಿಹೋಗಿ, ಹೆಂಚುಗಳು ಒಡೆದು ಹೋಗಿವೆ. ಚರಂಡಿ ನೀರು ನುಗ್ಗಿದ ಪರಿಣಾಮ ಮನೆಯೊಳಗಿದ್ದ ರಾಗಿ, ತೊಗರಿ ಸೇರಿ ದವಸ ಧಾನ್ಯಗಳು ನೀರುಪಾಳಾಗಿವೆ. ಪರ್ಯಾಯ ವ್ಯವಸ್ಥೆ ಇಲ್ಲದೆ ಇಡೀ ರಾತ್ರಿ ಜಾಗರಣೆ ಮಾಡಿದ್ದಾರೆ.ಮಳೆಯ ಪ್ರಮಾಣ ಸಾಮಾನ್ಯವಾಗಿತ್ತಾದರೂ ವ್ಯಾಪಕ ಗಾಳಿಗೆ ತುಂಬಸೋಗೆ ಗ್ರಾಮದಿಂದ ಇಟ್ನ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮಾರ್ಗದಲ್ಲಿ ವಿದ್ಯುತ್ ಕಂಬ ಮುರಿದು ಬಿದ್ದಿದ್ದೆ. ಪರಿಣಾಮ ಸಂಪರ್ಕ ಕಡಿತಗೊಂಡು ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣ ಆಗಿತ್ತು. ಜೊತೆಗೆ ಸಮೀಪದಲ್ಲೇ ಇದ್ದ ಬೃಹತ್ ಮರವೊಂದಕ್ಕೆ ಸಿಡಿಲು ತಾಕಿ ನೆಲಕ್ಕಪ್ಪಳಿಸಿದೆ.ಬಿಡುಗಲು ಸಮೀಪದ ಕೆಮ್ಮಣ್ಣುಗುಂಡಿ ಬಳಿ ನಾಲ್ಕೆöÊದು ಮರಗಳು ಬಿದ್ದು, ರಸ್ತೆಗಳನ್ನೆಲ್ಲ ಆವರಿಸಿಕೊಂಡಿದ್ದರಿAದ ಶನಿವಾರ ಮುಂಜಾನೆಯೇ ಸರಗೂರು-ಎಚ್.ಡಿ.ಕೋಟೆ ಮಾರ್ಗದಲ್ಲಿ ರಸ್ತೆ ಸಂಚಾರವಿರಲಿಲ್ಲ. ಅಕ್ಕಪಕ್ಕದ ಗ್ರಾಮಸ್ಥರು ಸ್ಥಳಕ್ಕಾಗಮಿಸಿ ಮರಗಳನ್ನು ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಮಳೆ ಅನಾಹುತ ಆಸ್ಪತ್ರೆಗೆ ದಾಖಲು: ಹೂವಿನ ಕೊಳೆ ಗ್ರಾಮದ ರೈತ ಪ್ರತಾಪ್ ಅವರ ಜಮೀನಿನಲ್ಲಿ ಬೆಳೆದಿದ್ದ ನೇಂದ್ರ ಬಾಳೆ ಬೆಳೆ , ಹುಲಿಕುರ ಗ್ರಾಮದ ತಮ್ಮಯ್ಯನಾಯಕರ ಜಮೀನಲ್ಲಿ ತಲಾ ಎರಡು ಎಕರೆ ಬಾಳೆ , ಬಸಾಪುರ ಮಹಾದೇವನಾಯಕ ೧ ಎಕರೆ ಬಾಳೆ ಸಂಪೂರ್ಣವಾಗಿ ನೆಲೆಕಚ್ಚಿದೆ.ದೇವಲಾಪುರ ಗ್ರಾಮದ ಮಂಗಳಮ್ಮ ಅವರ ಮನೆ ಹಾಗೂ ಅಂಕನಾಥಪುರದಲ್ಲಿ ಮನೆಯೊಂದು ಜಖಂಗೊAಡಿದೆ. .ಹ್ಯಾಂಡ್ ಪೋಸ್ಟ್ ಪಟ್ಟಣದ ಮಹಾದೇವಮ್ಮ ಅವರ ಮನೆಯ ಮೇಲ್ಛಾವಣಿ ಹಾರಿದ ಪರಿಣಾಮ ತಾಯಿ ಮಗುವಿಗೆ ಗಾಯವಾಗಿದ್ದು, ಹೆಚ್ ಡಿ ಕೋಟೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ, ಪುರಸಭೆ ಮುಖ್ಯಧಿಕಾರಿ ಪಿ.ಸುರೇಶ್ ಭೇಟಿ ನೀಡಿ ಗಾಯಳುಗಳ ಆರೋಗ್ಯ ವಿಚಾರಿಸಿದರು.*ಇಟ್ನ ಗ್ರಾಮದಲ್ಲಿ ಸಾಕಷ್ಟು ಹಾನಿ*ಇಟ್ನ ಗ್ರಾಮದ ಮರಿನಾಯ್ಕರ ಜಮೀನಿನ ಒಂದು ಎಕರೆ ಬಾಳೆ, ರಾಮನಾಯಕರ ಜಮೀನಿನಲ್ಲಿ ಒಂದು ಎಕರೆ ತೆಂಗಿನ ಮರಗಳು ಧರೆಗುರುಳಿವೆ. ರವಿಸ್ವಾಮಿ ಹಾಗೂ ದೊಡ್ಡಯ್ಯ ಅವರ ಮನೆಯ ಮೇಲ್ಛಾವಣಿ ಹಾರಿಹೋಗಿದರೆ,, ಇದೇ ಗ್ರಾಮದ ಚನ್ನನಾಯಕ ಅವರು ಬೆಳೆದಿದ್ದ ಐದು ಎಕರೆ ಬಾಳೆ ನೆಲೆಸಮವಾಗಿದೆ.. ಚಿಕ್ಕಮ್ಮ ಅವರ ಮನೆಯ ಸಮೀಪವಿದ್ದ ತೆಂಗಿನ ಮರ ಮನೆ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮುಂಗಾರು ಎದುರಿಸಲು ಸೆಸ್ಕ್ ಸನ್ನದ್ಧವಾಗಿರಲಿ; ಸೆಸ್ಕ್ ಪ್ರಭಾರ ಎಂಡಿ ನಿತೇಶ್ ಪಾಟೀಲ್ ಸೂಚನೆ * ದೂರು ನಿರ್ವಹಣೆ, ಮೆಟೀರಿಯಲ್ಸ್ ಸಂಗ್ರಹ ಸಮರ್ಕವಾಗಿರಲಿ
ಮೈಸೂರು: ಮುಂಗಾರು ಅವಧಿಯಲ್ಲಿ ಉಂಟಾಗಬಹುದಾದ ವಿದ್ಯುತ್ ವ್ಯತ್ಯಯ ಹಾಗೂ ತುರ್ತು ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಸೆಸ್ಕ್ ಸಂಪೂರ್ಣ ಸನ್ನದ್ಧವಾಗಿರಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾದ ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಸೂಚನೆ ನೀಡಿದರು. ಮೈಸೂರಿನ ವಿಜಯನಗರ ೨ನೇ ಹಂತದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಪ್ರಧಾನ ಕಚೇರಿಯಲ್ಲಿ ಮುಂಗಾರು ಹಿನ್ನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ, ಸೆಸ್ಕ್ ವ್ಯಾಪ್ತಿಯ ಐದು ಜಿಲ್ಲೆಗಳ ಉಪ ವಿಭಾಗಗಳ ವ್ಯಾಪ್ತಿಯ ದೂರುಗಳ ನಿರ್ವಹಣೆ, ವಿದ್ಯುತ್ ಅಡಚಣೆಗಳು, ಸಾರ್ವಜನಿಕ ಸಂಪರ್ಕ ವ್ಯವಸ್ಥೆ ಹಾಗೂ ಅಗತ್ಯವಿರುವ ಸಾಮಗ್ರಿಗಳ ಸಂಗ್ರಹ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು. ನಂತರ ಮಾತನಾಡಿದ ಅವರು, ``ಮುಂಗಾರು ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳನ್ನು ಎದುರಿಸಲು ಸೆಸ್ಕ್ ಸನ್ನದ್ಧವಾಗಿದೆ ಎಂಬ ವಿಶ್ವಾಸ ಜನರಲ್ಲಿ ಮೂಡಬೇಕು. ಸಾರ್ವಜನಿಕರು ಸಂಪರ್ಕಿಸಲು ಸಾಧ್ಯವಾಗದಿದ್ದರೆ ಸಮಸ್ಯೆ ಪರಿಹರಿಸಲು ಸಾಧ್ಯವಿಲ್ಲ. ಆದ್ದರಿಂದ ದೂರು ಸ್ವೀಕಾರ ಮತ್ತು ಸ್ಪಂದನಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕಿದೆ. ಈ ನಿಟ್ಟಿನಲ್ಲಿ ಮುಂಗಾರು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ತ್ವರಿತವಾಗಿ ಸ್ಪಂದನೆ ನೀಡುವುದು ಅತ್ಯಂತ ಮುಖ್ಯವಾಗಿದೆ. ಹೀಗಾಗಿ ಸೆಸ್ಕ್ ಟೋಲ್ಫ್ರೀ ಹಾಗೂ ಸಾರ್ವಜನಿಕ ಸಂಪರ್ಕ ಸಂಖ್ಯೆಗಳು ನಿರಂತರವಾಗಿ ಕಾರ್ಯನಿರ್ವಹಿಸಬೇಕಿದೆ. ಆದ್ದರಿಂದ ನಿಷ್ಕಿçಯವಾಗಿರುವ ಸಂಪರ್ಕ ಸಂಖ್ಯೆಗಳನ್ನು ತಕ್ಷಣವೇ ಸಕ್ರಿಯಗೊಳಿಸಬೇಕು'' ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇದೇ ವೇಳೆ ಐದು ಜಿಲ್ಲೆಗಳ ವ್ಯಾಪ್ತಿಯ ವಿಭಾಗಗಳ ಕಾರ್ಯಪಾಲಕ ಅಭಿಯಂತರರೊAದಿಗೆ ಚರ್ಚೆ ನಡೆಸಿ, ಮುಂಗಾರು ಸಂದರ್ಭದಲ್ಲಿ ಎದುರಾಗಬಹುದಾದ ಸಮಸ್ಯೆಗಳು ಹಾಗೂ ಅವುಗಳನ್ನು ಎದುರಿಸಲು ಅಗತ್ಯವಿರುವ ಮೆಟೀರಿಯಲ್ಸ್ಗಳ ಲಭ್ಯತೆ ಕುರಿತು ಮಾಹಿತಿ ಪಡೆದರು. ಮೊದಲ ಮಳೆಯಲ್ಲೇ ಸಾಕಷ್ಟು ತೊಂದರೆಗಳು ಎದುರಾಗಿರುವುದರಿಂದ ಅಗತ್ಯ ಸಾಮಗ್ರಿಗಳನ್ನು ಮುಂಚಿತವಾಗಿಯೇ ಸಂಗ್ರಹಿಸಿಟ್ಟುಕೊಳ್ಳುವAತೆ''ಸೂಚಿಸಿದರು.``ಸಮಸ್ಯೆ ಉಂಟಾದ ಬಳಿಕ ಮೆಟೀರಿಯಲ್ಸ್ ಕೇಳುವ ಬದಲು ಪೂರ್ವಯೋಜಿತವಾಗಿ ಸ್ಟಾಕ್ ಇಟ್ಟುಕೊಳ್ಳಬೇಕು. ಪದೇ ಪದೇ ಬೇಡಿಕೆ ಇಡುವುದಕ್ಕಿಂತ ಅಗತ್ಯವಿರುವಷ್ಟು ಸಾಮಗ್ರಿಗಳನ್ನು ಈಗಲೇ ಪೂರೈಕೆ ಮಾಡಿಕೊಳ್ಳುವುದು ಉತ್ತಮ,'' ಎಂದ ಅವರು, ಎಲ್ಲಾ ಇಇಗಳು ತಮ್ಮ ವಿಭಾಗಗಳಲ್ಲಿರುವ ಸ್ಟಾಕ್ ಮಾಹಿತಿಯನ್ನು ನಿರಂತರವಾಗಿ ಅಪ್ಡೇಟ್ ಮಾಡಬೇಕು'' ಎಂದು ಸೂಚಿಸಿದರು. ``ಸರಿಯಾದ ಸಮಯಕ್ಕೆ ಮೆಟೀರಿಯಲ್ಸ್ ಸಪ್ಲೇ ಆಗದಿದ್ದರೆ ಕೆಲಸ ನಿರ್ವಹಿಸುವುದು ಕಷ್ಟ. ಎಲ್ಲಾ ವಿಭಾಗಗಳಿಗೂ ಶೀಘ್ರವಾಗಿ ಸಾಮಗ್ರಿಗಳು ತಲುಪಬೇಕು. ಆದ್ದರಿಂದ ಯಾವುದೇ ಡಿವಿಜನ್ನಿಂದ ಬೇಡಿಕೆ ಬಂದ ಕೂಡಲೇ ಅಗತ್ಯ ಸಾಮಗ್ರಿಗಳನ್ನು ತ್ವರಿತವಾಗಿ ಪೂರೈಸಬೇಕು ಎಂದು ನಿಗಮ ಕಚೇರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಮುಂಗಾರು ಅವಧಿಯಲ್ಲಿ ಹೆಚ್ಚಿನ ಬೇಡಿಕೆ ಇರುವುದರಿಂದ ಕನಿಷ್ಠ ಎರಡು ತಿಂಗಳಿಗೆ ಅಗತ್ಯವಾಗುವಷ್ಟು ಕಂಬಗಳು ಹಾಗೂ ಇತರೆ ಮೆಟೀರಿಯಲ್ಸ್ಗಳನ್ನು ಈಗಲೇ ಪೂರೈಕೆ ಮಾಡಬೇಕು,'' ಎಂದು ನಿರ್ದೇಶನ ನೀಡಿದರು.ನಿರ್ಲಕ್ಷ÷್ಯ ಗುತ್ತಿಗೆದಾರರಿಗೆ ನೋಟೀಸ್ ನೀಡಿ:ಮುಂಗಾರು ಸಂದರ್ಭದಲ್ಲಿ ಎಸ್ಒಪಿ ಪ್ರಕಾರ ಕೆಲಸ ನಿರ್ವಹಿಸದ ಗುತ್ತಿಗೆದಾರರಿಗೆ ನೋಟೀಸ್ ನೀಡಬೇಕಿದೆ. ಮಳೆಗಾಲದ ಸಂದರ್ಭದಲ್ಲಿ ಸಮಯಕ್ಕೆ ಸರಿಯಾಗಿ ಹಾಗೂ ಗುಣಮಟ್ಟದ ಕೆಲಸ ಮಾಡುವ ಗುತ್ತಿಗೆದಾರರಿಗೆ ಹೆಚ್ಚಿನ ಕೆಲಸ ನೀಡಬೇಕು. ಕೆಲಸದಲ್ಲಿ ನಿರ್ಲಕ್ಷ÷್ಯ ತೋರಿಸುವವರಿಗೆ ಕಡಿಮೆ ಕೆಲಸ ನೀಡಬೇಕಿದೆ. ಮುಂಗಾರು ವೇಳೆ ಕೆಲಸದಲ್ಲಿ ವಿಳಂಬ ಮಾಡಿದರೆ ಸಮಸ್ಯೆ ಪರಿಹಾರ ಆಗುವುದಿಲ್ಲ. ಹೀಗಾಗಿ ಅಂತಹ ಗುತ್ತಿಗೆದಾರರಿಗೆ ನೋಟೀಸ್ ನೀಡಿ ಎಂದು ಸೂಚನೆ ನೀಡಿದರು. ಸಭೆಯಲ್ಲಿ ತಾಂತ್ರಿಕ ನಿರ್ದೇಶಕರಾದ ಶರಣಮ್ಮ ಎಸ್. ಜಂಗಿನ, ಮುಖ್ಯ ಪ್ರಧಾನ ವ್ಯವಸ್ಥಾಪಕಿ(ಆಂತರಿಕ ಲೆಕ್ಕಪರಿಶೋಧನೆ) ಲಿಂಗರಾಜಮ್ಮ, ಮುಖ್ಯ ಇಂಜಿನಿಯರ್ ಎಲ್. ಲೋಕೇಶ್, ಅಧೀಕ್ಷಕ ಇಂಜಿನಿಯರ್ಗಳಾದ ಸುನೀಲ್ ಕುಮಾರ್, ಸೋಮಶೇಖರ್, ಪ್ರಧಾನ ವ್ಯವಸ್ಥಾಪಕರಾದ ಡಾ.ಬಿ.ಆರ್. ರೂಪ, ಆರ್. ರಾಮಸ್ವಾಮಿ, ಎಚ್.ಆರ್. ದಿನೇಶ್ ಹಾಗೂ ಇತರ ಅಧಿಕಾರಿಗಳು ಇದ್ದರು.================= ಕೋಟ್ಮಳೆಗಾಲದ ಸಮಯದಲ್ಲಿ ಸಾಕಷ್ಟು ಕಡೆಗಳಲ್ಲಿ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರಲಿದೆ. ಇಂತಹ ಸಂದರ್ಭಗಳಲ್ಲಿ ಅತ್ಯಂತ ಎಚ್ಚರಿಕೆಯಿಂದ ಕೆಲಸ ಮಾಡಬೇಕಿದ್ದು, ಸೆಸ್ಕ್ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ವಿದ್ಯುತ್ ಅಪಘಾತಗಳು ಆಗದಂತೆ ನಿಗಾವಹಿಸಬೇಕು. ನಿತೇಶ್ ಪಾಟೀಲ್, ವ್ಯವಸ್ಥಾಪಕ ನಿರ್ದೇಶಕರು(ಪ್ರಭಾರ), ಸೆಸ್ಕ್, ಮೈಸೂರು. =================